ಬೆಳ್ತಂಗಡಿ (ವಿಶ್ವ ಕನ್ನಡಿಗ ನ್ಯೂಸ್) : ತಾಲೂಕಿನ ಗೇರುಕಟ್ಟೆ ಎಂಬಲ್ಲಿ ಶಾಲಾ ವಿದ್ಯಾರ್ಥಿನಿಯೊಬ್ಬಳು ಅಸಹಜ ಸ್ಥಿತಿಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಗೇರುಕಟ್ಟೆಯ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಕಲಿಯುತ್ತಿದ್ದ, ಕುಪ್ಪೆಟ್ಟಿ ನಿವಾಸಿ ಅಬ್ದುರ್ರಝಾಕ್ ಎಂಬವರ ಪುತ್ರಿ ಆಸಿಫಾ(16) ಮೃತಪಟ್ಟ ಬಾಲಕಿ.
ಶನಿವಾರ ಬೆಳಗ್ಗೆ ಬಸ್ಸಿನಿಂದ ಇಳಿದ ಆಸಿಫಾ ಸಮೀಪದ ಮನೆಯೊಂದಕ್ಕೆ ತೆರಳಿ ಶೌಚಾಲಯಕ್ಕೆ ಹೋಗಿದ್ದಾಳೆ ಎನ್ನಲಾಗಿದೆ. ತುಂಬಾ ಹೊತ್ತಾದರೂ ಶೌಚಾಲಯದಿಂದ ಬಾರದಿದ್ದಾಗ ಮನೆಯವರು ಕರೆದರೂ, ಯಾವುದೇ ಉತ್ತರ ಬರಲಿಲ್ಲ. ಕೂಡಲೇ ಮನೆಯವರು ಶಾಲೆಗೆ, ಸ್ಥಳೀಯ ಗ್ರಾಪಂ ಸದಸ್ಯ ಅಬ್ದುಲ್ ಕರೀಂ ಎಂಬವರಿಗೆ ಮಾಹಿತಿ ನೀಡಿದ್ದಾರೆ, ಅವರು ಬಂದು ಶೌಚಾಲಯದ ಬಾಗಿಲು ಮುರಿದು ನೋಡಿದಾಗ ವಿದ್ಯಾರ್ಥಿನಿ ನರಳಾಡುತ್ತಿರುವುದು ಕಂಡುಬಂದಿದೆ. ಕೂಡಲೇ ಗುರುವಾಯನಕೆರೆಯ ಖಾಸಗಿ ಆಸ್ಪತ್ರೆಗೆ ತಲುಪಿಸಿದರೂ ಆಕೆಯ ಜೀವವನ್ನು ಉಳಿಸಲಾಗಲಿಲ್ಲ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.