ಕುಂದಾಪುರ (ವಿಶ್ವ ಕನ್ನಡಿಗ ನ್ಯೂಸ್) : ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿಯೋರ್ವ ಬಸ್ಸಿನಿಂದ ರಸ್ತೆಗೆ ಬಿದ್ದು, ಬಸ್ ಚಕ್ರದಡಿಗೆ ಸಿಲುಕಿ ಮೃತಪಟ್ಟ ದಾರುಣ ಘಟನೆ ಹೆಮ್ಮಾಡಿಯ ಜಂಕ್ಷನ್ ನಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಕೋಟೇಶ್ವರ ಕಾಗೇರಿಯ ವರದರಾಜ ಎಂ. ಶೆಟ್ಟಿ ಪ್ರಥಮ ದರ್ಜೆ ಕಾಲೇಜಿನ ಅಂತಿಮ ವರ್ಷದ ಬಿಕಾಂ ವಿದ್ಯಾರ್ಥಿ, ಹೆಮ್ಮಾಡಿ ಸಮೀಪದ ಕಟ್ ಬೆಲ್ತೂರ್ ನಿವಾಸಿ ಸುದೀಪ್ ಪೂಜಾರಿ ಮೃತಪಟ್ಟ ವಿದ್ಯಾರ್ಥಿ..
ಕುಂದಾಪುರಕ್ಕೆ ತೆರಳುವ ಖಾಸಗಿ ಬಸ್ ನಲ್ಲಿ ಕಟ್ ಬೆಲ್ತೂರ್ ನಲ್ಲಿ ಸುದೀಪ್ ಬಸ್ ಹತ್ತಿದ್ದರು. ಹೆಮ್ಮಾಡಿಯಲ್ಲಿ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಇಳಿಸಿ ಮತ್ತೆ ಹತ್ತಿಸಿಕೊಳ್ಳಲಾಗಿದ್ದು, ಬಸ್ ಮುಂದಕ್ಕೆ ಚಲಿಸುತ್ತಿದ್ದಂತೆ ಮಹಿಳೆಯೊಬ್ಬರು ಇಳಿಯಲು ಬಾಕಿಯಿರುವುದಾಗಿ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಚಾಲಕ ಬಸ್ ನಿಲ್ಲಿಸುತ್ತಿದ್ದಂತೆ ಮುಂಬಾಗಿಲ ಬಳಿ ನಿಂತಿದ್ದ ಸುದೀಪ್ ಹಠಾತ್ತನೆ ಆಯತಪ್ಪಿ ಕೆಳಗೆ ಬಿದ್ದಿದ್ದಾರೆನ್ನಲಾಗಿದೆ. ಅವರ ಮೇಲೆಯೇ ಬಸ್ ಮುಂದಿನ ಚಕ್ರ ಹರಿದ ಪರಿಣಾಮ ಗಂಭೀರ ಗಾಯಗೊಂಡಿದ್ದ ಸುದೀಪ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.