ಹೈದರಾಬಾದ್ (ವಿಶ್ವ ಕನ್ನಡಿಗ ನ್ಯೂಸ್) : ಕಾರೊಂದು ಬೈಕ್ ಅನ್ನು ಸುಮಾರು 10 ಕಿ.ಮೀ. ದೂರದವರೆಗೆ ಎಳೆದೊಯ್ದ ಪರಿಣಾಮ ಇಬ್ಬರು ಯುವಕರು ಮೃತಪಟ್ಟ ಘಟನೆ ತೆಲಂಗಾಣದ ಜಗ್ತಿಯಾಲ್ ಜಿಲ್ಲೆಯ ಮಲ್ಯಾಲ ಮಂಡಲದ ಮುತ್ಯಂಪೇಟೆಯಲ್ಲಿ ನಡೆದಿದೆ. ಕರೀಮ್’ನಗರ ಜಿಲ್ಲೆಯ ಮಾನಕೊಂಡೂರು ನಿವಾಸಿಗಳಾದ ಅಬ್ದುಲ್ ಲತೀಫ್ ಮತ್ತು ಮುಹಮ್ಮದ್ ಹಮೀದ್ ಖಾನ್ ಮೃತಪಟ್ಟವರು.
ವೇಗವಾಗಿ ಬಂದ ಕಾರು ಬೈಕ್’ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಅಡಿಯಲ್ಲಿ ಬೈಕ್ ಸಿಲುಕಿತ್ತು, ಕಾರು ಚಾಲಕ ನಿಲ್ಲಿಸದೇ ಸುಮಾರು 10 ಕಿ.ಮೀ ಹಾಗೇ ಎಳೆದುಕೊಂಡು ಹೋದ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ. ಬೈಕ್ ಓಡಿಸುತ್ತಿದ್ದ ಹಮೀದ್ ಖಾನ್ ನನ್ನು ಬೈಕ್ ಸಮೇತ ಕಾರು ಚಾಲಕ ಎಳೆದೊಯ್ದಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲೇ ಹಮೀದ್ ಖಾನ್ ಕೊನೆಯುಸಿರೆಳೆದಿದ್ದಾರೆ.
ಹಿಂಬದಿ ಸವಾರ ಅಬ್ದುಲ್ ಲತೀಫ್ ಕಾರು ಡಿಕ್ಕಿಯಾದ ಸಂದರ್ಭದಲ್ಲಿ ರಸ್ತೆಗೆ ಬಿದ್ದಿದ್ದರು. ಅವರನ್ನು ಚಿಕಿತ್ಸೆಗಾಗಿ ಹೈದರಾಬಾದ್’ನ ನಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸಿದೇ ಅವರು ಮೃತಪಟ್ಟಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಾರು ಚಾಲಕ ಸಾಯಿವರ್ಧನ್ ಎಂಬಾತನನ್ನು ಬಂಧಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.