ನವದೆಹಲಿ (ವಿಶ್ವ ಕನ್ನಡಿಗ ನ್ಯೂಸ್) : ಮೊಘಲ್ ದೊರೆಗಳ ಹೆಸರಿನಲ್ಲಿರುವ ದೇಶದ ಎಲ್ಲಾ ಸ್ಥಳಗಳನ್ನು ಗುರುತಿಸಿ ಮರುನಾಮಕರಣ ಮಾಡಬೇಕು ಎಂದು ಹೇಳುವ ಮೂಲಕ ಬಿಜೆಪಿ ಮುಖಂಡ ಸುವೇಂದು ಅಧಿಕಾರಿ ವಿವಾದ ಸೃಷ್ಟಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಒಂದು ವಾರದೊಳಗೆ ನಾವು ಎಲ್ಲಾ ಸ್ಥಳಗಳ ಹೆಸರುಗಳನ್ನು ಬದಲಾಯಿಸುತ್ತೇವೆ ಎಂದು ಅವರು ಹೇಳಿದರು.
ಮೊಘಲ್ ಆಡಳಿತಗಾರರು ಅನೇಕ ಹಿಂದೂಗಳನ್ನು ಕೊಂದರು ಮತ್ತು ದೇವಾಲಯಗಳನ್ನು ನಾಶಪಡಿಸಿದರು ಎಂದು ಸುವೇಂದು ಆರೋಪಿಸಿದರು. ರಾಷ್ಟ್ರಪತಿ ಭವನದ ಉದ್ಯಾನವನ್ನು ‘ಮೊಘಲ್ ಗಾರ್ಡನ್’ ಅನ್ನು ‘ಅಮೃತ್ ಉದ್ಯಾನ್’ ಎಂದು ಮರುನಾಮಕರಣ ಮಾಡಿದ ಹಿನ್ನೆಲೆಯಲ್ಲಿ ಸುವೇಂದು ಅವರ ಹೇಳಿಕೆ ಬಂದಿದೆ. ಅಮೃತ್ ಉದ್ಯಾನ್ ಜನವರಿ 31 ರಿಂದ ಮಾರ್ಚ್ 26 ರವರೆಗೆ ಸಾರ್ವಜನಿಕರಿಗೆ ತೆರೆದಿರುತ್ತದೆ. ರಾಷ್ಟ್ರಪತಿ ಭವನದಲ್ಲಿರುವ ಉದ್ಯಾನವನ್ನು ವರ್ಷಕ್ಕೊಮ್ಮೆ ಸಾರ್ವಜನಿಕರಿಗೆ ತೆರೆಯಲಾಗುತ್ತದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.