ವಿಜಯಪುರ (ವಿಶ್ವ ಕನ್ನಡಿಗ ನ್ಯೂಸ್) : ಪತಿಯೊಂದಿಗೆ ಜಗಳವಾಡಿದ ಮಹಿಳೆಯೋರ್ವರು ತನ್ನ ಮೂವರು ಮಕ್ಕಳನ್ನು ಬಾವಿಗೆ ಎಸೆದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ವಿಜಾಪುರ ತಿಕೋಡ ಜಲಗೇರಿ ವಿಠಲವಾಡ ತಾಂಡಾದ ಗೀತಾ ರಾಮು ಚೌಹಾಣ್ (32) ಆತ್ಮಹತ್ಯೆ ಮಾಡಿಕೊಂಡವರು. ಮೃತರನ್ನು ಸೃಷ್ಟಿ, ಸಮರ್ಥ ಮತ್ತು ಕೃಷ್ಣ ಎಂದು ಗುರುತಿಸಲಾಗಿದೆ.
ಪೊಲೀಸರ ಪ್ರಕಾರ, ಶನಿವಾರ ರಾತ್ರಿ ಪತಿ ರಾಮು ಚೌಹಾಣ್ ಮತ್ತು ಗೀತಾ ಜಗಳವಾಡಿದ್ದಾರೆ, ಬಳಿಕ ಗೀತಾ ತನ್ನ ಮೂವರು ಮಕ್ಕಳನ್ನು ಬಾವಿಗೆ ಎಸೆದಿದ್ದಾರೆ. ಟಿಕೋಡಾ ಪೊಲೀಸರ ಪ್ರಕಾರ, ರಾಮು ಭಾನುವಾರ ಬೆಳಿಗ್ಗೆ ಎಚ್ಚರಗೊಂಡು ತನ್ನ ಹೆಂಡತಿ ಮತ್ತು ಮಕ್ಕಳನ್ನು ಹುಡುಕಿದಾಗ ವಿಷಯ ಬೆಳಕಿಗೆ ಬಂದಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.