ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಸುರತ್ಕಲ್ ಫಾಝಿಲ್ ಹತ್ಯೆಯ ರೂವಾರಿ ತಾವೇ ಎಂದು ಬಹಿರಂಗ ಹೇಳಿಕೆ ನೀಡಿರುವ ಭಜರಂಗದಳದ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಅವರನ್ನು ಬಂಧಿಸುವಂತೆ ಆಗ್ರಹಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಫಾಝಿಲ್ ತಂದೆ ದೂರು ದಾಖಲಿಸಿದ್ದಾರೆ.
ನಗರ ಪೊಲೀಸ್ ಆಯುಕ್ತರಾದ ಎನ್. ಶಶಿಕುಮಾರ್ ಅವರು ದೂರು ಸ್ವೀಕರಿಸಿ, ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ದೂರು ನೀಡುವಂತೆ ಫಾಝಿಲ್ ತಂದೆಗೆ ಸೂಚನೆ ನೀಡಿದ್ದಾರೆ. ಅಲ್ಲದೆ ಪ್ರಕರಣದ ಬಗ್ಗೆ ಕಾನೂನು ಸಲಹೆ ಪಡೆದು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಬಳಿಕ ಮಾತನಾಡಿದ ಫಾಝಿಲ್ ತಂದೆ ಉಮರ್ ಫಾರೂಕ್, ಶರಣ್ ಪಂಪ್ ವೆಲ್ ತನ್ನ ಪುತ್ರನ ಹತ್ಯೆಯನ್ನು ಸಂಭ್ರಮಿಸಿದ್ದಾನೆ. ಎಂಟು ಮಂದಿ ಓರ್ವನನ್ನು ಹತ್ಯೆ ಮಾಡಿದ್ದಾರೆ. ಅದು ನಿಜವಾದ ಶೌರ್ಯ ಅಲ್ಲ, ಹೇಡಿತನವಾಗಿದೆ. ಶರಣ್ ಪಂಪ್ ವೆಲ್ಗೆ ತಾಕತ್ ಇದ್ದಲ್ಲಿ ನಾನು ಒಬ್ಬನೇ ಬರುತ್ತೇನೆ. ಆಗ ನನ್ನೊಂದಿಗೆ ಕಾದಾಡಲಿ, ನಾನು ನೋಡಿಕೊಳ್ಳುತ್ತೇನೆ. ಹಿಂದೂ ಬೇರೆ, ಹಿಂದುತ್ವ ಬೇರೆ. ಹಿಂದೂಗಳು ಒಳ್ಳೆಯವರು. ಆದರೆ ಹಿಂದುತ್ವದಲ್ಲಿ ಇರುವವರು ಹಣ ತೆಗೆದುಕೊಂಡು ಕೃತ್ಯ ಮಾಡುವವರಾಗಿದ್ದಾರೆ. ಈ ಬಗ್ಗೆ ಎಡಿಜಿಪಿಗೂ ಮನವಿ ಮಾಡಿದ್ದೇನೆ ಎಂದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.