ಲಖನೌ (ವಿಶ್ವ ಕನ್ನಡಿಗ ನ್ಯೂಸ್) : ಭಾರತೀಯ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿದ್ದಾರೆ. ಲಕ್ನೋದಲ್ಲಿ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯ ಎರಡನೇ ಪಂದ್ಯದ ನಂತರ ಸೂರ್ಯಕುಮಾರ್ ಮುಖ್ಯಮಂತ್ರಿಯನ್ನು ಅವರ ನಿವಾಸಕ್ಕೆ ಭೇಟಿ ಮಾಡಿದರು. ಸೂರ್ಯಕುಮಾರ್ ಅವರ ಚಿತ್ರವನ್ನು ಟ್ವಿಟರ್ನಲ್ಲಿ ಹಂಚಿಕೊಂಡಿರುವ ಯೋಗಿ, ತಾರೆಯನ್ನು ಮಿಸ್ಟರ್ 360 ಡಿಗ್ರಿ ಎಂದು ಬಣ್ಣಿಸಿದ್ದಾರೆ.
ಲಕ್ನೋದಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ಎರಡೂ ತಂಡಗಳು ರನ್ ಗಳಿಸಲು ಪರದಾಡುತ್ತಿದ್ದ ಸಂದಭದಲ್ಲಿ ಸೂರ್ಯಕುಮಾರ್ ಯಾದವ್ 30 ಎಸೆತಗಳಲ್ಲಿ 26 ರನ್ ಗಳಿಸಿ ಅಜೇಯರಾಗಿ ಉಳಿದರು. 100 ರನ್ಗಳ ಗುರಿ ಬೆನ್ನತ್ತಿದ ಭಾರತಕ್ಕೆ ಗೆಲುವಿಗೆ ಕೊನೆಯ ಎರಡು ಎಸೆತಗಳಲ್ಲಿ ಮೂರು ರನ್ಗಳ ಅಗತ್ಯವಿತ್ತು. ಆದರೆ ಸೂರ್ಯಕುಮಾರ್ ಕೊನೆಯ ಓವರ್ ನ ಐದನೇ ಎಸೆತದಲ್ಲಿ ಬೌಂಡರಿ ದಾಟುವ ಮೂಲಕ ಭಾರತವನ್ನು ಗೆಲುವಿನತ್ತ ಮುನ್ನಡೆಸಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.