ವಯನಾಡ್ (ವಿಶ್ವ ಕನ್ನಡಿಗ ನ್ಯೂಸ್) : ಕಣ್ಣೂರು ನಿವಾಸಿಗಳು ಪ್ರಯಾಣಿಸುತ್ತಿದ್ದ ಕಾರಿಗೆ ವಯನಾಡಿನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಯಾರಿಗೂ ಗಾಯವಾಗಿಲ್ಲ. ಬೆಂಕಿಯನ್ನು ನೋಡಿದ ಪ್ರಯಾಣಿಕರು ಓಡಿಹೋದರು. ತಲಪುಝ 44ರಲ್ಲಿ ಈ ಘಟನೆ ನಡೆದಿದೆ. ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರು ಬೆಂಕಿ ನಂದಿಸಲು ಯತ್ನಿಸಿದರಾದರೂ ಫಲಕಾರಿಯಾಗಲಿಲ್ಲ. ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ಬೆಂಕಿಗೆ ಕಾರಣ ಸ್ಪಷ್ಟವಾಗಿಲ್ಲ.
ಕೆಲ ದಿನಗಳ ಹಿಂದೆ ತಲಪುಝದಲ್ಲಿ ಮತ್ತೊಂದು ವಾಹನ ಸುಟ್ಟು ಕರಕಲಾಗಿತ್ತು. ಕಳೆದ ದಿನ ಎರ್ನಾಕುಲಂ ಕುರುಪಂಪಾಡಿಯಲ್ಲಿಯೂ ಕಾರೊಂದು ಹೊತ್ತಿ ಉರಿದಿತ್ತು. ವಾಹನದಿಂದ ಹೊಗೆ ಬರುತ್ತಿರುವುದನ್ನು ಕಂಡ ಚಾಲಕ ಕಾರು ನಿಲ್ಲಿಸಿ ಹೊರ ಬಂದಿದ್ದರಿಂದ ಭಾರೀ ಅನಾಹುತ ತಪ್ಪಿದೆ. ಪುಂಟಕುಳಿ ಮೂಲದ ಎಲ್ದೋಸ್ ಎಂಬವರು ಕಾರು ಚಲಾಯಿಸುತ್ತಿದ್ದರು. ಮಾರುತಿ ಆಲ್ಟೊ ಕಾರು ಅಪಘಾತಕ್ಕೀಡಾಗಿದೆ. ನಂತರ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸಿತು. ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.