ಕುಟ್ಟಿಕೋಲ್ (ವಿಶ್ವ ಕನ್ನಡಿಗ ನ್ಯೂಸ್) : ಅಂಗಡಿಯಿಂದ ಸರಕುಗಳನ್ನು ಖರೀದಿಸಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂಬತ್ತು ವರ್ಷದ ಬಾಲಕ ಮೃತಪಟ್ಟಿದ್ದಾನೆ. ಮೃತನನ್ನು ಕುಟ್ಟಿಕೋಲ್ ನ ಪಲ್ಲತುಪಾರ ನಿವಾಸಿ ಮುಹಮ್ಮದ್ ನೌಶಾದ್ ಮತ್ತು ಮುನೀಬಾ ದಂಪತಿಯ ಪುತ್ರ ಮುಹಮ್ಮದ್ ಬಿಲಾಲ್ ಎಂದು ಗುರುತಿಸಲಾಗಿದೆ.
ಅವರು ತಮ್ಮ ಮನೆಯ ಹತ್ತಿರದ ಅಂಗಡಿಯಿಂದ ಸರಕುಗಳನ್ನು ಖರೀದಿಸಿದ ನಂತರ ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದೆ. ಗಂಭೀರ ಸ್ಥಿತಿಯಲ್ಲಿದ್ದ ಮಗುವನ್ನು ಚೆಂಗಳ ಸಹಕಾರಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅವನ ಜೀವವನ್ನು ಉಳಿಸಲು ಸಾಧ್ಯವಾಗಲಿಲ್ಲ. ಕಾರು ವೇಗವಾಗಿ ಚಲಿಸುತ್ತಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಈತ ಕುಟ್ಟಿಕೋಲ್ ನ ಎಯುಪಿ ಶಾಲೆಯಲ್ಲಿ 3ನೇ ತರಗತಿ ವಿದ್ಯಾರ್ಥಿಯಾಗಿದ್ದಾನೆ. ಭಾನುವಾರ ಸಂಜೆ ಈ ಅಪಘಾತ ಸಂಭವಿಸಿದೆ. ಏಕೈಕ ಸಹೋದರ: ಮುಹಮ್ಮದ್ ನಿಶಾಲ್. ಬೇಡಕಂ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.