ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ ರಾವ್ ಅವರು ಆಮ್ ಆದ್ಮಿ ಪಕ್ಷ ತೊರೆದು ಬಿಜೆಪಿ ಪಕ್ಷದ ಹಿರಿಯ ಪ್ರಭಾವಿ ಮುಖಂಡ ಎನ್.ಶಂಕ್ರಪ್ಪ ನೇತೃತ್ವದಲ್ಲಿ ಕಮಲ ಪಡೆ ಸೇರ್ಪಡೆಗೊಂಡಿದ್ದಾರೆ. ಅವರು ಇಂದು ಮಲ್ಲೇಶ್ಚರಂ ನ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನತಾ ಪಕ್ಷ ಸೇರಿದರು.
ಭಾರತೀಯ ಜನತಾ ಪಕ್ಷದ ಹಿರಿಯ ಮುಖಂಡ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಎನ್.ಶಂಕ್ರಪ್ಪ ಅವರು ಆಮ್ ಆದ್ಮಿ ಪಕ್ಷದಲ್ಲಿದ್ದ ಭಾಸ್ಕರ ರಾವ್ ಅವರ ಮನವೋಲಿಸಿ, ಬಿಜೆಪಿಗೆ ಕರೆ ತಂದಿದ್ದಾರೆ. ಭಾಸ್ಕರ ರಾವ್ ಅವರಿಗೆ ಎನ್.ಶಂಕ್ರಪ್ಪ ಮತ್ತು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷರಾದ ನಳೀನ್ ಕುಮಾರ ಕಟೀಲ್ ಅವರು ಪಕ್ಷದ ಧ್ವಜ ನೀಡುವ ಮೂಲಕ ಪಕ್ಷಕ್ಕೆ ಬರ ಮಾಡಿಕೊಂಡರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.