ಹೊಸದಿಲ್ಲಿ (ವಿಶ್ವ ಕನ್ನಡಿಗ ನ್ಯೂಸ್) : ಅಯೋಧ್ಯೆಯ ಐದು ಎಕರೆ ಜಾಗದಲ್ಲಿ ನಿರ್ಮಾಣವಾಗಲಿರುವ ಮಸೀದಿಯು ಬಾಬರಿ ಮಸೀದಿಗಿಂತ ದೊಡ್ಡದಾಗಿರುತ್ತದೆ ಎಂದು ಇಂಡೋ-ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್ ಹೇಳಿದೆ. ಬಾಬರಿ ಮಸೀದಿ-ರಾಮಜನ್ಮಭೂಮಿ ತೀರ್ಪಿನಲ್ಲಿ ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರವು ಸುಪ್ರೀಂ ಕೋರ್ಟ್ನ ಆದೇಶದಂತೆ ಮಸೀದಿ ನಿರ್ಮಿಸಲು ಅಂತಿಮ ಅನುಮತಿ ನೀಡಿತ್ತು.
ಇಂಡೋ-ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್ ಟ್ರಸ್ಟ್ (IICF)ಗೆ ಉತ್ತರ ಪ್ರದೇಶ ಸರ್ಕಾರವು ಒದಗಿಸಿದ ಐದು ಎಕರೆ ಜಾಗದಲ್ಲಿ ಮಸೀದಿ, ಆಸ್ಪತ್ರೆ, ಸಂಶೋಧನಾ ಕೇಂದ್ರ, ಸಮುದಾಯ ಅಡುಗೆ ಕೋಣೆ ಮತ್ತು ಗ್ರಂಥಾಲಯವನ್ನು ನಿರ್ಮಿಸುತ್ತದೆ. ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರದಿಂದ (ಎಡಿಎ) ಬಾಕಿ ಉಳಿದಿರುವ ಅನುಮೋದನೆಗಳು ಮತ್ತು ಭೂ ಬಳಕೆಯ ನಿರ್ಬಂಧಗಳಿಂದಾಗಿ ಎರಡು ವರ್ಷಗಳಿಂದ ನಿರ್ಮಾಣವು ವಿಳಂಬವಾಗಿತ್ತು.
‘ಶುಕ್ರವಾರ ನಡೆದ ಮಂಡಳಿ ಸಭೆಯು ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣ ಯೋಜನೆಗೆ ಅನುಮೋದನೆ ನೀಡಿದೆ. ಇಲಾಖಾ ಪ್ರಕ್ರಿಯೆಗಳು ಕೆಲವೇ ದಿನಗಳಲ್ಲಿ ಪೂರ್ಣಗೊಂಡ ನಂತರ, ಮಾರ್ಗಸೂಚಿಗಳನ್ನು ಇಂಡೋ-ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್ಗೆ ಹಸ್ತಾಂತರಿಸಲಾಗುವುದು ಎಂದು ಅಯೋಧ್ಯೆ ವಿಭಾಗೀಯ ಆಯುಕ್ತ ಗೌರವ್ ದಯಾಲ್ ಪಿಟಿಐಗೆ ತಿಳಿಸಿದ್ದಾರೆ.
ಎಲ್ಲಾ ಅನುಮೋದನೆಗಳನ್ನು ಪಡೆದ ನಂತರ, ಟ್ರಸ್ಟ್ ಶೀಘ್ರದಲ್ಲೇ ಸಭೆ ನಡೆಸಿ ಮಸೀದಿ ನಿರ್ಮಾಣದ ಯೋಜನೆಯನ್ನು ಅಂತಿಮಗೊಳಿಸಲಿದೆ ಎಂದು ಐಐಸಿಎಫ್ ಕಾರ್ಯದರ್ಶಿ ಅತಾರ್ ಹುಸೇನ್ ಹೇಳಿದ್ದಾರೆ.
ಭಾರತದ ಸಂವಿಧಾನವು ಜಾರಿಗೆ ಬಂದ ದಿನವಾದ ಜನವರಿ 26, 2021 ರಂದು ನಾವು ಮಸೀದಿಯ ಅಡಿಪಾಯವನ್ನು ಹಾಕಿದ್ದೇವೆ. ಧನಿಪುರದಲ್ಲಿ ನಿರ್ಮಾಣವಾಗಲಿರುವ ಮಸೀದಿಯು ಬಾಬರಿ ಮಸೀದಿಗಿಂತ ದೊಡ್ಡದಾಗಿರುತ್ತದೆ. ಹೊಸ ಮಸೀದಿ ಅಯೋಧ್ಯೆಯಲ್ಲಿರುವಂತೆ ಕಾಣುವುದಿಲ್ಲ ಎಂದು ಅತಾರ್ ಹುಸೇನ್ ಹೇಳಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.