ಅರಕಲಗೂಡು (www.vknews.in) : ಬಿಜೆಪಿ ಶಾಸಕ ಹಾಗೂ ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ ನಿಯಮಿತ ಅಧ್ಯಕ್ಷ ವಿರೂಪಾಕ್ಷಪ್ಪ ಅವರ ಮನೆಯಲ್ಲಿ ಆರು ಕೋಟಿ ರೂ. ನಗದು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಬಸವರಾಜ ಬೊಮ್ಮಾಯಿ ಸರಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿರುವುದು ಸಾಬೀತಾಗಿದೆ.ಹೀಗಾಗಿ ಬಿಜೆಪಿ ‘ಭ್ರಷ್ಟ ಜನತಾ ಪಾರ್ಟಿ’ಯಾಗಿದೆ ಇತ್ತೀಚಿನ ಎಲ್ಲಾ ಪ್ರಕರಣಗಳು ಬೊಮ್ಮಾಯಿ ಸರಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ ಎಂಬುದು ಸಾಬೀತುಗೊಳಿಸುತ್ತದೆ. 40 ಪರ್ಸೆಂಟ್ ಭ್ರಷ್ಟ ಸರಕಾರದಿಂದ ರಾಜ್ಯವೇ ತಲೆತಗ್ಗಿಸುವಂತಾಗಿದೆ.
ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ 40 ಲಕ್ಷ ರೂ.ನೊಂದಿಗೆ ರೆಡ್ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ. 24 ಗಂಟೆ ಒಳಗೆ ಮನೆಯಲ್ಲಿ 6 ಕೋಟಿ ರೂ. ನಗದು ಪತ್ತೆಯಾಗಿದೆ. ಮೈಸೂರು ಸ್ಯಾಂಡಲ್ ಸುವಾಸನೆಯನ್ನು ಇವರು ಭ್ರಷ್ಟ ಗೊಳಿಸಿದ್ದಾರೆ. ಇದು ರಾಜ್ಯ ಸರಕಾರದ ಭ್ರಷ್ಟಾಚಾರಕ್ಕೆ ಹಿಡಿದ ಕೈಗನ್ನಡಿ. ಸಾಬೂನಿನಿಂದಲೇ ಇಷ್ಟೊಂದು ಭ್ರಷ್ಟಾಚಾರವಾಗಿದ್ದರೆ ರಾಜ್ಯದ ಭ್ರಷ್ಟಾಚಾರ ಪ್ರಮಾಣ ಎಷ್ಟಿರಬಹುದು ಎಂದು ಪ್ರಶ್ನಿಸಿದರು.
ಜೀಷಾನ್ ಯುವ ಕಾಂಗ್ರೆಸ್ ಮುಖಂಡರು ಅರಕಲಗೂಡು
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.