ಹೊಸದಿಲ್ಲಿ (ವಿಶ್ವ ಕನ್ನಡಿಗ ನ್ಯೂಸ್) : ಮಕ್ಕಳ ಸಾವಿಗೆ ಕಾರಣವಾದ ಕೆಮ್ಮಿನ ಸಿರಪ್ ತಯಾರಿಕಾ ಕಂಪನಿ ಮರಿಯನ್ ಬಯೋಟೆಕ್ ಪರವಾನಗಿ ರದ್ದುಗೊಳಿಸುವಂತೆ ಉತ್ತರ ಪ್ರದೇಶದ ಔಷಧ ನಿಯಂತ್ರಣ ಪ್ರಾಧಿಕಾರಕ್ಕೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಕಂಪನಿಯಿಂದ ಪರೀಕ್ಷೆಗಾಗಿ ಪಡೆಯಲಾದ 36 ಮಾದರಿಗಳ ಪೈಕಿ 22ರಲ್ಲಿ ಎಥಿಲೀನ್ ಗ್ಲೈಕೋಲ್ (Ethylene glycol) ಕಲಬೆರಕೆಯಾಗಿರುವುದು ಕಂಡುಬಂದ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ.
ಜನವರಿಯಲ್ಲಿ ಉಜ್ಬೇಕಿಸ್ತಾನದಲ್ಲಿ ಕೆಮ್ಮಿನ ಔಷಧಿ ಸೇವಿಸಿ 18 ಮಕ್ಕಳು ಪ್ರಾಣ ಕಳೆದುಕೊಂಡ ದಾರುಣ ಘಟನೆ ನಡೆದಿತ್ತು. ಇದರ ಬೆನ್ನಲ್ಲೇ, ಭಾರತದ 2 ಕೆಮ್ಮಿನ ಸಿರಪ್ಗಳನ್ನು ಬಳಸದಂತೆ ಉಜ್ಬೇಕಿಸ್ತಾನಕ್ಕೆ ವಿಶ್ವ ಆರೋಗ್ಯ ಸಂಸ್ಥೆ (WHO) ಶಿಫಾರಸು ಮಾಡಿತ್ತು. ಮೆರಿಯನ್ ಬಯೋಟೆಕ್ನಿಂದ ತಯಾರಿಸಲ್ಪಟ್ಟ ಉತ್ಪನ್ನಗಳು ಗುಣಮಟ್ಟದ ಮಾನದಂಡಗಳು ಅಥವಾ ವಿಶೇಷಣಗಳನ್ನು ಪೂರೈಸಲು ವಿಫಲವಾಗಿವೆ. ಹೀಗಾಗಿ ಅವುಗಳನ್ನು ಬಳಸಬಾರದು ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿತ್ತು.
ಇದಕ್ಕೂ ಮುನ್ನ ಕೆಮ್ಮಿನ ಔಷಧ ಸೇವಿಸಿ ಗ್ಯಾಂಬಿಯಾದಲ್ಲಿಯೂ ಮಕ್ಕಳು ಮೃತಪಟ್ಟಿದ್ದರು. ಮಹಾರಾಷ್ಟ್ರದಲ್ಲಿ 6 ಕೆಮ್ಮು ಸಿರಪ್ ತಯಾರಕರ ಪರವಾನಗಿ ರದ್ದುಗೊಳಿಸಿದ ಬೆನ್ನಲ್ಲೇ ಮೆರಿಯನ್ ಬಯೋಟೆಕ್ ಪರವಾನಗಿ ರದ್ದತಿ ನಿರ್ಧಾರವೂ ಪ್ರಕಟವಾಗಿದೆ. ಮಹಾರಾಷ್ಟ್ರದಲ್ಲಿ 6 ಕೆಮ್ಮು ಸಿರಪ್ ತಯಾರಕರ ಪರವಾನಗಿಗಳನ್ನು ರದ್ದುಗೊಳಿಸಲಾಗಿದೆ. ರಾಜ್ಯದಲ್ಲಿ 108 ಕೆಮ್ಮು ಸಿರಪ್ ತಯಾರಕರ ಪೈಕಿ 84 ತಯಾರಕರ ವಿರುದ್ಧ ಮಹಾರಾಷ್ಟ್ರ ಸರ್ಕಾರ ತನಿಖೆಯನ್ನು ಪ್ರಾರಂಭಿಸಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.