ಕೋಲಾರ ( ವಿಶ್ವ ಕನ್ನಡಿಗ ನ್ಯೂಸ್ ) : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ -2023 ರ ಹಿನ್ನೆಲೆಯಲ್ಲಿ ವಿದ್ಯುನ್ಮಾನ ಮತಯಂತ್ರ ( ಇವಿಎಂ ) ಬಳಕೆ ಹಾಗೂ ಮತದಾನ ಖಾತ್ರಿ ಯಂತ್ರ ( ವಿ.ವಿ. ಪ್ಯಾಟ್ ) ಕಾರ್ಯವೈಖರಿ ಕುರಿತಂತೆ ಪ್ರಾತ್ಯಕ್ಷತೆ ಮೂಲಕ ಜಾಗೃತಿ ಮೂಡಿಸಲಾಯಿತು.
ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ -2023 ರ ಸಂಬಂಧ ಕೋಲಾರ ಜಿಲ್ಲೆಯ ವಿಧಾನಸಭಾ ಕ್ಷೇತ್ರವಾರು ನೇಮಿತವಾದ ಚುನಾವಣಾ ಅಧಿಕಾರಿಗಳು , ರಾಜಕೀಯ ಪಕ್ಷಗಳು ಮತ್ತು ಮಾಧ್ಯಮದವರಿಗೆ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಇವಿಎಂ ಹಾಗೂ ವಿವಿಪ್ಯಾಟ್ಗಳ ನಿರ್ವಹಣೆ ಕುರಿತು ಜಿಲ್ಲಾಧಿಕಾರಿಗಳ ಕಛೇರಿಯ ನೂತನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.
ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು , ಸಾರ್ವಜನಿಕರಿಗೆ ಮತ ಚಲಾವಣೆಯ ಬಗ್ಗೆ ಅರಿವು ಮೂಡಿಸಬೇಕು. ಗ್ರಾಮ ಪಂಚಾಯತ್ ಮತ್ತು ತಾಲ್ಲೂಕು ಮಟ್ಟದಲ್ಲಿಯೂ ಸಹ ಸಾರ್ವಜನಿಕರಿಗೆ ವಿದ್ಯುನ್ಮಾನ ಮತಯಂತ್ರದ ಬಗ್ಗೆ ಅರಿವು ಮೂಡಿಸಬೇಕು ಎಂದರು.
ಈ ಬಾರಿ ಎಂ -3 ಹೆಸರಿನ ಸುಧಾರಿತ ಮತ ಯಂತ್ರಗಳನ್ನು ಬಳಸಲಾಗುತ್ತಿದೆ. ಈ ಹಿಂದಿನ ಮತ ಯಂತ್ರಕ್ಕಿಂತ ಸಾಕಷ್ಟು ಆಧುನಿಕ ತಂತ್ರಜ್ಞಾನವನ್ನು ಹೊಂದಿರುತ್ತದೆ ಈ ಮತಯಂತ್ರದಲ್ಲಿ ಕಂಟ್ರೋಲ್ ಯೂನಿಟ್ ಒಂದೇ ಬಾರಿಗೆ ಒಂದು ವಿಧಾನ ಸಭಾ ಕ್ಷೇತ್ರದಲ್ಲಿ ಗರಿಷ್ಠ ಅಭ್ಯರ್ಥಿಗಳ ತನಕ ಮತ ಹಾಕಲು ಅನುಕೂಲವಾಗುವಂತೆ ವಿನ್ಯಾಸಗೊಳಿಸಲಾಗಿದೆ ಎಂದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ನಾರಾಯಣ್ ಅವರು ಮಾತನಾಡಿ , ಚುನಾವಣಾ ಪ್ರಕ್ರಿಯೆಯಲ್ಲಿ ಅಧಿಕಾರಿಗಳ ಪಾತ್ರ ಮಹತ್ವವಾಗಿದ್ದು , ಜವಾಬ್ದಾರಿ ಅರಿತು ಕಾರ್ಯನಿರ್ವಹಿಸಬೇಕು. ಮತಗಟ್ಟೆಗಳ ಸ್ಥಿತಿಗತಿ , ಅಲ್ಲಿನ ಮೂಲಭೂತ ಸೌಕರ್ಯ ಮುಂತಾದ ಅಗತ್ಯ ಮಾಹಿತಿ ಸಂಗ್ರಹಿಸಿ ಅಗತ್ಯ ಕ್ರಮ ವಹಿಸಲು ಮುಂದಾಗಬೇಕು . ಕಾರ್ಯನಿರ್ವಹಣೆಯನ್ನು ಸಹ ಸಂಪೂರ್ಣವಾಗಿ ತಿಳಿದುಕೊಳ್ಳಬೇಕು. ಮತದಾನದ ಜಾಗೃತಿ ಕುರಿತಂತೆ ಜಿಲ್ಲೆಯಾದ್ಯಂತ ಪ್ರಾತ್ಯಕ್ಷಿತೆ ಕಾರ್ಯಕ್ರಮ ಮೂಲಕ ಜನರಿಗೆ ಅರಿವು ಮೂಡಿಸಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯುಕೇಶ್ ಕುಮಾರ್ , ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧಿಕಾರಿ ಭಾಸ್ಕರ್ , ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.