ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಉಳ್ಳಾಲ ಸಯ್ಯದ್ ಮುಹಮ್ಮದ್ ಶರೀಫುಲ್ ಮದನಿ ದರ್ಗಾ ಕಮಿಟಿಯ ನೂತನ ಆಡಳಿತ ಮಂಡಳಿಗೆ ಅಧ್ಯಕ್ಷರಾಗಿ ಬಿ.ಜಿ.ಹನೀಫ್ ಹಾಜಿ ಆಜಾದ್ ನಗರ, ಪ್ರಧಾನ ಕಾರ್ಯದರ್ಶಿಯಾಗಿ ಶಿಹಾಬುದ್ದೀನ್ ಸಖಾಫಿ ಅಲೈಕಳ, ಖಜಾಂಚಿಯಾಗಿ ನಾಝಿಮ್ ರಹ್ಮಾನ್ ಕೋಟೆಪುರ ಆಯ್ಕೆಯಾದರು. ಯುಎಂ ಅಶ್ರಫ್ ಅಹ್ಮದ್ ರೈಟ್ವೇ ಉಪಾಧ್ಯಕ್ಷರಾಗಿದ್ದಾರೆ.
ಕಳೆದ ತಿಂಗಳು ನಡೆದ ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಚುನಾವಣೆಯಲ್ಲಿ ಜಯಗಳಿಸಿದ 55 ಸದಸ್ಯರು ಸೋಮವಾರ ಬೆಳಿಗ್ಗೆ ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಮಂಡಳಿಯ ಸಲಹಾ ಅಧ್ಯಕ್ಷ ಲಕ್ಕಿಸ್ಟಾರ್ ಅಬ್ದುಲ್ ನಾಸಿರ್ ಅವರ ಅಧ್ಯಕ್ಷತೆಯಲ್ಲಿ ಸಭೆ ಸೇರಿ ಹೊಸ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಿದರು. ಚುನಾವಣಾಧಿಕಾರಿಯಾಗಿರುವ ಜಿಲ್ಲಾ ವಕ್ಫ್ ಮಂಡಳಿಯ ಮುಖ್ಯಾಧಿಕಾರಿ ಮುಅಝಾಮ್ ಪಾಷಾ ಅವರು ಚುನಾವಣೆಯನ್ನು ನಿಯಂತ್ರಿಸಿದರು. ಶೀಘ್ರದಲ್ಲೇ ಸಮಿತಿ ಸಭೆ ಕರೆದು ಮುಂದಿನ ಕಾರ್ಯಕ್ರಮಗಳನ್ನು ಯೋಜಿಸಲಾಗುವುದು ಎಂದು ಪದಾಧಿಕಾರಿಗಳು ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.