ವಿಜಯನಗರ (ವಿಶ್ವ ಕನ್ನಡಿಗ ನ್ಯೂಸ್) : ವಿಜಯನಗರದಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಖಾಸಗಿ ಶಾಲಾ ಶಿಕ್ಷಕಿಯೊಬ್ಬರು ಶಾಲಾ ಕೊಠಡಿಯಲ್ಲೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹಡಗಲಿಯ ನ್ಯಾಷನಲ್ ಶಾಲೆಯ ಶಿಕ್ಷಕಿ ಬಸಮ್ಮ ಅಲಿಯಾಸ್ ರೂಪಾ (34) ಆತ್ಮಹತ್ಯೆ ಮಾಡಿಕೊಂಡವರು.
ಅದೇ ಶಾಲಾಯಲ್ಲಿ ಪತಿ ಅರ್ಜುನ್ ಪರಶೆಟ್ಟಿ ಕೋಡಾ ಶಿಕ್ಷಕರಾಗಿದ್ದಾರೆ. ಇವರು ಪರಸ್ಪರ ಪ್ರೀತಿಸಿ 10 ವರ್ಷಗಳ ಹಿಂದೆ ಮದುವೆಯಾಗಿದ್ದರು. ನಂತರ ಪತಿ ಹಾಗೂ ಆತನ ಕುಟುಂಬದವರಿಂದ ರೂಪಾಗೆ ವರದಕ್ಷಿಣೆ ಕಿರುಕುಳ ನೀಡಲಾಗಿದೆ. ಇದರಿಂದ ಮನನೊಂದು ರೂಪಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.
ಈ ಶಾಲೆಯು ಅರ್ಜುನ್ ಕುಟುಂಬದ ಒಡೆತನಕ್ಕೆ ಸೇರಿದ್ದಾಗಿದೆ. ಪತಿ ಮನೆಯವರು ವರದಕ್ಷಿಣೆ ಕಿರುಕುಳ ನೀಡುತ್ತಿದ್ದರಿಂದ ಬೇಸತ್ತಿದ್ದ ರೂಪಾ, ಭಾನುವಾರ ಪರೀಕ್ಷೆ ಕೆಲಸದ ನೆಪದಲ್ಲಿ ಶಾಲೆಗೆ ಬಂದು ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಹಡಗಲಿ ಪೊಲೀಸ್ ಠಾಣೆಯಲ್ಲಿ ಪತಿ ಅರ್ಜುನ್, ಅತ್ತೆ ಅಂಬಿಕಾ, ನಾದಿನಿ ಸಂಗೀತಾ ಸೇರಿದಂತೆ ಆರು ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.