ಅಲಿಗಢ (ವಿಶ್ವ ಕನ್ನಡಿಗ ನ್ಯೂಸ್) : ಹೋಳಿ ಹಬ್ಬದ ಪ್ರಯುಕ್ತ ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯ ಆರು ಮಸೀದಿಗಳನ್ನು ಟಾರ್ಪಾಲಿನ್ ನಿಂದ ಮುಚ್ಚಲಾಗಿದೆ. ಈ ಮಸೀದಿಗಳು ಡೆಹ್ಲಿ ಗೇಟ್, ಬನ್ನಾ ದೇವಿ ಮತ್ತು ಕೊಟ್ವಾಲಿ ಪ್ರದೇಶಗಳಲ್ಲಿವೆ. ಮಾಧ್ಯಮ ವರದಿಗಳ ಪ್ರಕಾರ, ರಾಷ್ಟ್ರೀಯ ಸ್ವಯಂಸೇವಕ ಸಂಘ ಆಯೋಜಿಸಿದ್ದ ಮೆರವಣಿಗೆಗಳು ಮತ್ತು ಕಾರ್ಯಕ್ರಮಗಳನ್ನು ಗಮನದಲ್ಲಿಟ್ಟುಕೊಂಡು ಆಡಳಿತದ ಸೂಚನೆಯಂತೆ ಅಬ್ದುಲ್ ಕರೀಂ ಚೌಕದಿಂದ ಡೆಹ್ಲಿ ಗೇಟ್ ಚೌಕದವರೆಗೆ ಹಲವಾರು ಮಸೀದಿಗಳನ್ನು ಟಾರ್ಪಲ್ ನಿಂದ ಮುಚ್ಚಲಾಗಿದೆ.
ಮಸೀದಿಗೆ ಬಣ್ಣಗಳು ಮತ್ತು ಇತರ ವಸ್ತುಗಳನ್ನು ಎಸೆಯದಂತೆ ತಡೆಯುವ ಉದ್ದೇಶದಿಂದ ಈ ರಕ್ಷಣೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೋಳಿ ದಿನದಂದು ಸಮಾಜ ವಿರೋಧಿ ಶಕ್ತಿಗಳ ಹೆಸರಿನಲ್ಲಿ ಯಾವುದೇ ರೀತಿಯ ಉದ್ವಿಗ್ನತೆ ಇರಬಾರದು ಎಂಬ ಕಾರಣಕ್ಕೆ ಇಂತಹ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಹಲ್ವಾಯನ್ ಮಸೀದಿಯನ್ನು ಕಳೆದ ಐದು ವರ್ಷಗಳಿಂದ ಟಾರ್ಪಾಲಿನ್ ನಿಂದ ಮುಚ್ಚಲಾಗುತಿತ್ತು. ಆದರೆ ಇತರ ಮಸೀದಿಗಳಲ್ಲಿ ಇಂತಹ ಕ್ರಮ ಕೈಗೊಂಡಿರುವುದು ಇದೇ ಮೊದಲು.
ಹೋಳಿ ಮತ್ತು ಬರಾತ್ ಹಿನ್ನೆಲೆಯಲ್ಲಿ ನಗರದಲ್ಲಿ ಕಾಲ್ನಡಿಗೆಯಲ್ಲಿ ಗಸ್ತು ತಿರುಗುವ ಮೂಲಕ ಭದ್ರತಾ ವ್ಯವಸ್ಥೆಯನ್ನು ನಿಯಂತ್ರಿಸಲು ಎಸ್ಎಸ್ಪಿ ಅಧೀನ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದಾರೆ. ಡ್ರೋನ್ ಕ್ಯಾಮೆರಾಗಳು ನಗರದ ಸೂಕ್ಷ್ಮ ಪ್ರದೇಶಗಳು ಮತ್ತು ಜನದಟ್ಟಣೆ ಪ್ರದೇಶಗಳನ್ನು ಮೇಲ್ವಿಚಾರಣೆ ಮಾಡುತ್ತಿವೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.