ರಾಯಚೂರು (ವಿಶ್ವ ಕನ್ನಡಿಗ ನ್ಯೂಸ್) : ಏರ್ ಕಂಡಿಷನರ್ ಸ್ಫೋಟಗೊಂಡ ಪರಿಣಾಮ ಮಹಿಳೆ ಹಾಗೂ ಆಕೆಯ ಇಬ್ಬರು ಹೆಣ್ಣು ಮಕ್ಕಳು ಸಜೀವ ದಹನವಾಗಿರುವ ದಾರುಣ ಘಟನೆ ರಾಯಚೂರಿನ ಶಕ್ತಿನಗರದಲ್ಲಿ ನಡೆದಿದೆ. ಮೃತರನ್ನು ಕೆ.ಎನ್.ರಂಜಿತಾ (31), ಮಕ್ಕಳಾದ ಮೃದುಲಾ (13) ಮತ್ತು ತರುಣ್ಯ ಎಂದು ಗುರುತಿಸಲಾಗಿದೆ.
ರಂಜಿತಾ ಮಂಡ್ಯ ಮಳವಳ್ಳಿ ಕೋಡಿಹಳ್ಳಿ ನಿವಾಸಿಯಾಗಿದ್ದು, ರಾಯಚೂರು ಶಾಖೋತ್ಪನ್ನ ಸ್ಥಾವರದ ಸಹಾಯಕರಾಗಿದ್ದಾರೆ. ಎಕ್ಸಿಕ್ಯೂಟಿವ್ ಇಂಜಿನಿಯರ್ ಆಗಿರುವ ಶ್ರೀಜಿತ್ ಮನೆಯಲ್ಲಿ ಇರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಕಿಟಕಿಯ ಮೂಲಕ ಹೊಗೆ ಏರುತ್ತಿರುವುದನ್ನು ನೋಡಿದ ನೆರೆಹೊರೆಯವರು ಅಗ್ನಿಶಾಮಕ ದಳಕ್ಕೆ ತಿಳಿಸಿ, ಅಗ್ನಿಶಾಮಕ ದಳವು ಬೆಂಕಿಯನ್ನು ನಂದಿಸಿದ ನಂತರ ಶವಗಳು ಪತ್ತೆಯಾಗಿವೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.