ನವದೆಹಲಿ (ವಿಶ್ವ ಕನ್ನಡಿಗ ನ್ಯೂಸ್) : ಅಲಹಾಬಾದ್ ಹೈಕೋರ್ಟ್ ಆವರಣದಲ್ಲಿರುವ ಮಸೀದಿಯನ್ನು ತೆರವುಗೊಳಿಸುವ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಮೂರು ತಿಂಗಳೊಳಗೆ ಮಸೀದಿ ತೆರವು ಮಾಡದಿದ್ದಲ್ಲಿ ರಾಜ್ಯ ಸರಕಾರ ಹಾಗೂ ಹೈಕೋರ್ಟ್ ಮುಂದಿನ ಕ್ರಮ ಜರುಗಿಸುವುದಾಗಿ ಹಾಗೂ ನ್ಯಾಯಮೂರ್ತಿ ಎಂ.ಆರ್. ಶಾ, ರವಿಕುಮಾರ್ ಪೀಠ ಹೇಳಿದೆ.
2017ರಲ್ಲಿ ಅಲಹಾಬಾದ್ ಹೈಕೋರ್ಟ್ ಕೋರ್ಟ್ ಆವರಣದಲ್ಲಿರುವ ಮಸೀದಿಯನ್ನು ಕೆಡವಲು ಆದೇಶ ನೀಡಿತ್ತು. ಇದರ ವಿರುದ್ಧ ವಕ್ಫ್ ಮಸೀದಿ ಹಾಗೂ ಯು.ಪಿ. ಸುನ್ನಿ ಸೆಂಟ್ರಲ್ ವಕ್ಫ್ ಬೋರ್ಡ್ ಸಲ್ಲಿಸಿದ್ದ ಅರ್ಜಿಗಳನ್ನೂ ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಸರ್ಕಾರದಿಂದ ಗುತ್ತಿಗೆ ಪಡೆದಿರುವ ಜಮೀನು ವಕ್ಫ್ ಭೂಮಿ ಹೇಗೆ ಆಯಿತು ಎಂಬುದನ್ನೂ ನ್ಯಾಯಾಲಯ ವಿಚಾರಣೆ ನಡೆಸಿದೆ.
ಮಸೀದಿಯನ್ನು ತೆಗೆದುಹಾಕುವ ಬದಲು ರಾಜ್ಯ ಸರ್ಕಾರದಿಂದ ಮತ್ತೊಂದು ಭೂಮಿಯನ್ನು ಕೋರಲು ಅರ್ಜಿದಾರರಿಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಈ ಬೇಡಿಕೆಯ ಮೇಲೆ ಬಂದಿರುವ ಅರ್ಜಿಯನ್ನು ಪರಿಶೀಲಿಸಿ ಕಾನೂನು ಆಧಾರದಲ್ಲಿ ಮುಂದಿನ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ನ್ಯಾಯಾಲಯ ಸೂಚಿಸಿದೆ. ಸರ್ಕಾರವು ಗುತ್ತಿಗೆ ಪಡೆದ ಭೂಮಿಯಲ್ಲಿ ಮಸೀದಿ ಇದೆ. ಆದರೆ 2002 ರಲ್ಲಿ ಗುತ್ತಿಗೆಯನ್ನು ರದ್ದುಗೊಳಿಸಲಾಯಿತು ಮತ್ತು ಹೈಕೋರ್ಟ್ನಿಂದ ಭೂಮಿಯನ್ನು ಅಭಿವೃದ್ಧಿಗೆ ಹಸ್ತಾಂತರಿಸಲಾಗಿದೆ ಎಂದು ಉತ್ತರ ಪ್ರದೇಶ ಸರ್ಕಾರ ಸುಪ್ರೀಂ ಕೋರ್ಟ್ಗೆ ತಿಳಿಸಿದೆ. ಆದರೆ ಮಸೀದಿ ಇರುವುದು ಹೈಕೋರ್ಟ್ ಆವರಣದಲ್ಲಿ ಅಲ್ಲ, ಹೈಕೋರ್ಟ್ ಮುಂಭಾಗದ ರಸ್ತೆಗೆ ಅಡ್ಡಲಾಗಿ ಇದೆ ಎಂದು ಅರ್ಜಿದಾರರು ಸುಪ್ರೀಂ ಕೋರ್ಟ್ನಲ್ಲಿ ಗಮನ ಸೆಳೆದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.