(www.vknews.in) ; ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ 2021ನೇ ಸಾಲಿನಲ್ಲಿ ವಿವಿಧ ಕೃತಿಗಳಿಗೆ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ವಿವಿಧ ದತ್ತಿಗಾಗಿ 49 ವಿಭಾಗಕ್ಕೆ ಆಯ್ಕೆಯಾದ 53 ಕೃತಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಸುಳ್ಯದ ಹಿರಿಯ ಸಾಹಿತಿ ಡಾ|| ಚಂದ್ರಶೇಖರ ದಾಮ್ಲೆ, ಬರಹಗಾರ್ತಿ ಡಾ|| ದೀಪಾ ಫಡ್ಕೆ, ಲೇಖಕಿ ಸ್ಮಿತಾ ಅಮೃತರಾಜ್, ಡಾ|| ಮುರಲೀಮೋಹನ್ ಚೂಂತಾರು, ಬಿ. ಸತ್ಯವತಿ ಎಸ್. ಭಟ್ ಕೊಳಚಪ್ಪು, ರಾಜಶ್ರೀ ರೈ ಪೆರ್ಲ, ಡಾ|| ಎಚ್.ಜೆ. ಶ್ರೀಧರ್ ಅವರ ಕೃತಿಗಳು ಪ್ರಶಸ್ತಿಗೆ ಆಯ್ಕೆಯಾಗಿದೆ. ಮಾರ್ಚ್ 12 ರಂದು ಕನ್ನಡ ಸಾಹಿತ್ಯ ಪರಿಷತ್ತಿನ ಆವರಣದಲ್ಲಿರುವ ಶ್ರೀ ಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ನಡೆದ ಸಮಾರಂಭವನ್ನು ಬೆಂಗಳೂರು ಬೆಂಗಳೂರು ಉತ್ತರ ವಿವಿ ಕುಲಪತಿ ಡಾ|| ನಿರಂಜನ ವಾನಳ್ಳಿ ಉದ್ಘಾಟಿಸಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ, ಡಾ|| ಮಹೇಶ ಜೋಶಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯಮಂತ್ರಿಗಳ ಕಾರ್ಯದರ್ಶಿ ಜಯರಾಂ ರಾಯಪುರ, ಹಿರಿಯ ಸಾಹಿತಿ ಪ್ರೊ. ಕಾಳೇ ಗೌಡ ನಾಗವಾರ ಉಪಸ್ಥಿತರಿದ್ದರು.
ಡಾ|| ಚಂದ್ರಶೇಖರ ದಾಮ್ಲೆ ಅವರ ‘ನನ್ನ ಮಗಳು ತುಂಟಿ ಅಲ್ಲಾ’ ಕೃತಿಗೆ ಡಾ|| ಎ.ಎಸ್. ಧರಣೇಂದ್ರಯ್ಯ-ಮನೋ ವಿಜ್ಞಾನ ದತ್ತಿ ಪ್ರಶಸ್ತಿ, ದೀಪಾ ಫಡ್ಕೆ ಅವರ ‘ಮುಂದಣ ಹೆಜ್ಜೆ’ ಕೃತಿ ಡಾ|| ವೀಣಾ ಶಾಂತೇಶ್ವರ ದತ್ತಿ ಪ್ರಶಸ್ತಿ, ಸ್ಮಿತಾ ಅಮೃತ್ರಾಜ್ ಸಂಪಾಜೆ ಅವರ ನೆಲದಾಯ ಪರಿಮಳ ಕೃತಿಗೆ ಗೌರಮ್ಮ ಹರ್ನಳ್ಳಿ ಕೆ. ಮಂಜಪ್ಪ ದತ್ತಿ ಪ್ರಶಸ್ತಿ, ಡಾ|| ಮುರಲೀಮೋಹನ್ ಚೂಂತಾರು ಅವರ ಸಂಗಾತಿ ಕೃತಿಗೆ ಬಿಸಿಲೇರಿ ಬ್ರದರ್ಸ್ ದತ್ತಿ ಪ್ರಶಸ್ತಿ ದೊರೆತಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.