(www.vknews.in) : ಒಂದು ಧರ್ಮದಲ್ಲಿದ್ದುಕೊಂಡು ಇನ್ನೊಂದು ಧರ್ಮದ ಆಚಾರ ವಿಚಾಗಳಿಗೆ ಅಗೌರವ ಕೊಡುವುದು ಎಲ್ಲಷ್ಟೂ ಸರಿಯಲ್ಲ. ಇತ್ತೀಚೆಗೆ ಮಂಗಳೂರಿನಲ್ಲಿ ಬಿಜೆಪಿಯ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಇಸ್ಲಾಮ್ ಧರ್ಮದ ಬಗ್ಗೆ ಟೀಕಿಸಿ ದೇವರ ಬಗ್ಗೆ ಅಪಹಾಸ್ಯ ಮಾಡಿದ್ದನ್ನು ಉಲ್ಲೇಖಿಸಿ ತೀಕ್ಷಣವಾಗಿ ಪ್ರತಿಕ್ರಿಯಿಸಿದ ಮಂಗಳೂರು ದಕ್ಷಿಣ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಡಾ.ಸುಮತಿ ಎಸ್ ಹೆಗ್ಡೆ ಇವರ ನಿಲುವು ಹಿಂದೂ ಧರ್ಮಕ್ಕೆ ಅಪಚಾರ ವೆಸಗಿದಂತೆ ಎಂದಿದ್ದಾರೆ.
ಹಿಂದೂ ಧರ್ಮದಲ್ಲೂ ಎಲ್ಲೂ ಇನ್ನೊಂದು ಧರ್ಮದ ಬಗ್ಗೆ ಕೆಟ್ಟದಾಗಿ ನುಡಿಯಲು ಎಲ್ಲಿಯೂ ಹೇಳಲಿಲ್ಲ. ಅದಲ್ಲದೆ ದೇವರು ಎಲ್ಲರಿಗೂ ಒಂದೇ . ಅವರವರ ಧರ್ಮದಲ್ಲಿ ಬೇರೆ ಬೇರೆ ಹೆಸರಲ್ಲಿ ಕರೆಯುತ್ತಾರೆ ಅಷ್ಟೇ. ಪರಮಾತ್ಮನನ್ನು ಅವಹೇಳನ ಮಾಡುವಂತಹ ಕೀಳುಮಟ್ಟದ ಹೇಳಿಕೆ ಕೊಡುವುದೆಂದರೆ ಅವರ ಘನತೆಗೆ ಯೋಗ್ಯವಲ್ಲದ ವಿಚಾರ ಮಾತ್ರವಲ್ಲ ಅವರ ಸಣ್ಣತನಕ್ಕೆ ನಿದರ್ಷಣ. ಈ ವಿಚಾರದಲ್ಲಿ ಈಶ್ವರಪ್ಪರವರು ಅಲ್ಪಸಂಖ್ಯಾತ ಮುಸ್ಲಿಮರ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಇವರನ್ನು ಕೂಡಲೇ ಭಂಧಿಸಿ , ಸೂಕ್ತ ಕಾಣೂನು ಕ್ರಮದಂತೆ ಶಿಕ್ಷಿಸಿಬೇಕು ಎಂದು ಅವರು ಹೇಳಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.