ವಿದಿಶಾ (ವಿಶ್ವ ಕನ್ನಡಿಗ ನ್ಯೂಸ್) : ಮಧ್ಯಪ್ರದೇಶದಲ್ಲಿ ಏಳು ವರ್ಷದ ಬಾಲಕನೊಬ್ಬ ಕೊಳವೆ ಬಾವಿಗೆ ಬಿದ್ದು ದಾರುಣ ಅಂತ್ಯ ಕಂಡಿದ್ದಾನೆ. 24 ಗಂಟೆಗಳ ಸುದೀರ್ಘ ಪ್ರಯತ್ನದಲ್ಲಿ ಬಾಲಕನನ್ನು ಕೊಳವೆಬಾವಿಯಿಂದ ರಕ್ಷಿಸಲಾಯಿತು, ಆದರೆ ಆಸ್ಪತ್ರೆಗೆ ತಲುಪುವ ವೇಳೆಗೆ ವೈದ್ಯರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ಈ ಕುರಿತು ವಿದಿಶಾ ಜಿಲ್ಲಾಧಿಕಾರಿ ಉಮಾ ಶಂಕರ ಭಾರ್ಗವ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಮಗುವಿನ ಕುಟುಂಬಕ್ಕೆ 4 ಲಕ್ಷ ರೂಪಾಯಿ ಆರ್ಥಿಕ ನೆರವು ಘೋಷಿಸಿದ್ದಾರೆ. ಲೋಕೇಶ್ ಅಹಿರ್ವಾರ್ ಎಂಬ ಏಳು ವರ್ಷದ ಬಾಲಕ ಮಂಗಳವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ 60 ಅಡಿ ಆಳದ ಬಾವಿಗೆ ಬಿದ್ದಿದ್ದಾನೆ. ಬಾಲಕ ಬಾವಿಯಲ್ಲಿ 43 ಅಡಿ ಆಳದಲ್ಲಿ ಸಿಲುಕಿಕೊಂಡಿದ್ದನು. ಮತ್ತೊಂದು ಜೆಸಿಬಿ ಬಳಸಿ ಬಾವಿಯ ಬಳಿ ಗುಂಡಿ ತೋಡಿ ಬಾಲಕಣ್ಣನು ಹೊರತೆಗೆಯಲಾಗಿತ್ತು, ಆದರೆ ಬಾಲಕನ ಜೀವ ಉಳಿಸಲು ಸಾಧ್ಯವಾಗಿಲ್ಲ..
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.