ಚಿಕ್ಕಬಳ್ಳಾಪುರ (ವಿಶ್ವ ಕನ್ನಡಿಗ ನ್ಯೂಸ್) : ತಾಲೂಕಿನ ಆವಲಗುರ್ಕಿ ಬಳಿಯ ಇಶಾ 112 ಅಡಿ ಎತ್ತರದ ಆದಿಯೋಗಿ ಪ್ರತಿಮೆ ನೋಡಲು ಬಂದ ಯುವಕನೊಬ್ಬ ಕಲ್ಲು ಕ್ವಾರಿ ಬಂಡೆಯ ನೀರಿನೊಳಗೆ ಮುಳುಗಿ ಸಾವನ್ನಪ್ಪಿದ್ದಾನೆ. ಬೆಂಗಳೂರಿನ ರಾಜಾಜೀನಗರದ ನಿವಾಸಿ ಮನೋಜ್ ಮೃತಪಟ್ಟ ಯುವಕ.
ಬಾಲಕ 10 ಮಂದಿ ಸ್ನೇಹಿತರ ತಂಡದೊಂದಿಗೆ ಬುಧವಾರ ಬೆಳಗ್ಗೆ ರೈಲಿನ ಮುಖಾಂತರ ಚಿಕ್ಕಬಳ್ಳಾಪುರಕ್ಕೆ ಆಗಮಿಸಿದ್ದರು. ನಂತರ ಇಶಾ ಫೌಂಡೇಶನ್ಗೆ ಭೇಟಿ ನೀಡಿ ಆದಿಯೋಗಿ ಪ್ರತಿಮೆಯ ದರ್ಶನ ಪಡೆದು ಫೋಟೋ ಕ್ಲಿಕ್ಕಿಸಿಕೊಂಡು ವಾಪಸ್ಸಾಗಿದ್ದಾರೆ. ಈ ವೇಳೆ ಮಾರ್ಗ ಮಧ್ಯೆ ಕೌರನಹಳ್ಳಿ ಬಳಿ ಇರುವ ಕಲ್ಲು ಕ್ವಾರಿಯ ಬಂಡೆಯಲ್ಲಿನ ನೀರು ಕಂಡು ಈಜಾಡಲು ಹೋಗಿದ್ದಾರೆ. ಮೂರು ಮಂದಿ ಸ್ನೇಹಿತರು ಈಜಾಡುತ್ತಿರುವಾಗಲೇ ಆಟವಾಡುತ್ತಾ ಬಾಲಕ ನೀರಿನಲ್ಲಿ ಮುಳುಗಿ ಹೋಗಿದ್ದಾನೆ. ಬಳಿಕ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕಾಗಮಿಸಿ, ಮೃತದೇಹವನ್ನು ಹೊರತೆಗೆದಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.