ನವದೆಹಲಿ (ವಿಶ್ವ ಕನ್ನಡಿಗ ನ್ಯೂಸ್) : ತಂದೆ ಮತ್ತು ಸಹೋದರಿಯೊಂದಿಗೆ ನಡೆದುಕೊಂಡು ಹೋಗುತ್ತಿದ್ದ 6 ವರ್ಷದ ಬಾಲಕನನ್ನು ಬೈಕ್ ನಲ್ಲಿ ಬಂದ ಅಪರಿಚಿತರು ಗುಂಡಿಕ್ಕಿ ಕೊಂದಿದ್ದಾರೆ. ಪಂಜಾಬ್ನ ಮಾನ್ಸಾದಲ್ಲಿ ಈ ಘಟನೆ ನಡೆದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಮೂವರು ಆರೋಪಿಗಳ ಪೈಕಿ ಇಬ್ಬರು ಬಂಧಿತರಾಗಿದ್ದಾರೆ ಎಂದು ವರದಿಯಾಗಿದೆ. ವೈಯಕ್ತಿಕ ದ್ವೇಷದಿಂದ ಕೊಲೆ ನಡೆದಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.
ಘಟನೆ ಕುರಿತು ಪೊಲೀಸರು ಹೇಳುವುದೇನೆಂದರೆ: ಗುರುವಾರ ರಾತ್ರಿ 8 ಗಂಟೆ ಸುಮಾರಿಗೆ ಘಟನೆ ನಡೆದಿದೆ. 35 ವರ್ಷದ ಜಸ್ಪ್ರೀತ್ ಸಿಂಗ್ ತನ್ನ ಎಂಟು ವರ್ಷದ ಮಗಳು ಮತ್ತು ಆರು ವರ್ಷದ ಮಗನೊಂದಿಗೆ ಮನೆಗೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಬೈಕ್ ನಲ್ಲಿ ಬಂದ ಗುಂಪು ಜಸ್ ಪ್ರೀತ್ ಮೇಲೆ ಗುಂಡಿನ ದಾಳಿ ನಡೆಸಿದೆ. ಆದರೆ ಗುಂಡು ತಾಗಿದ್ದು ಜಸ್ಪ್ರೀತ್ ಅವರ ಮಕ್ಕಳಿಗೆ. ಮಗ ಸಾವನ್ನಪ್ಪಿದ್ದು, ಮಗಳು ಗಾಯಗೊಂಡಿದ್ದಾರೆ.
ಅಮ್ರಿಕ್ ಸಿಂಗ್, ಸೇವಕ್ ಸಿಂಗ್ ಮತ್ತು ಚನ್ನಿ ನಿರಂತರವಾಗಿ ಬೆದರಿಕೆ ಹಾಕುತ್ತಿದ್ದಾರೆ ಎಂದು ಜಸ್ಪ್ರೀತ್ ಈ ಹಿಂದೆ ಪೊಲೀಸರಿಗೆ ದೂರು ನೀಡಿದ್ದರು. ಅವರ ನಡುವಿನ ಜಗಳದ ಮಾಹಿತಿ ಇನ್ನೂ ಹೊರಬಿದ್ದಿಲ್ಲ. ಈ ಘಟನೆಯನ್ನು ರಾಜ್ಯದ ರಾಜಕೀಯ ಪಕ್ಷಗಳು ತರಾಟೆಗೆ ತೆಗೆದುಕೊಂಡಿವೆ. ಸರ್ಕಾರ ಮತ್ತು ಪೊಲೀಸರ ವಿರುದ್ಧ ಪ್ರತಿಭಟನೆಗಳು ನಡೆದಿವೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.