(www.vknews.in) ; ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರೆ ಸಮೀಪ ಕಾಶಿಪಟ್ನದಲ್ಲಿ ಕಾರ್ಯನಿರ್ವಹಿಸುತ್ತಿರುವ ಧಾರ್ಮಿಕ ಲೌಕಿಕ ಶಿಕ್ಷಣ ಸಂಸ್ಥೆ ದಾರುನ್ನೂರ್ ಎಜುಕೇಶನ್ ಸೆಂಟರ್ ಇದರ ರಿಯಾದ್ ಸಮಿತಿಯ ಪ್ರಚಾರ ಸಂಗಮ ಮಾರ್ಚ್ 17 ರಂದು ರಿಯಾದಿನ ಅಪೋಲೋ ಡೆಮೊರಾ ಹೋಟೆಲ್ ಸಭಾಂಗಣದಲ್ಲಿ ನಡೆಯಿತು.
ಸಮಸ್ತ ಇಸ್ಲಾಮಿಕ್ ಸೆಂಟರ್ (SIC) ಕರ್ನಾಟಕ ರಿಯಾದ್ ಸಮಿತಿಯ ಅಧ್ಯಕ್ಷರಾದ ಮೊಹಮ್ಮದ್ ಆರಿಫ್ ಬಾಖವಿ ದುಃಅಗೈದು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ದಾರುನ್ನೂರ್ ರಿಯಾದ್ ಸಮಿತಿಯ ಅಧ್ಯಕ್ಷರಾದ ಸಯ್ಯದ್ ಶಾಹುಲ್ ಹಮೀದ್ ತಂಗಳ್ ಅಧ್ಯಕ್ಷತೆ ವಹಿಸಿದ್ದರು.
ದಾರುನ್ನೂರು ಶಿಲ್ಪಿ, ಮಂಗಳೂರು ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಸಂಗಮದ ನೇತೃತ್ವ ವಹಿಸಿದ್ದರು. ದಾರುನ್ನೂರ್ ಪ್ರಾಂಶುಪಾಲರಾದ ಹುಸೈನ್ ರಹ್ಮಾನಿ ದಾರುನ್ನೂರ್ ನಡೆದು ಬಂದ ಹಾದಿ ಮತ್ತು ಮುಂದಿನ ಯೋಜನೆಗಳ ಬಗ್ಗೆ ವಿವರಿಸಿದರು. ದಾರುನ್ನೂರ್ ಪ್ರದಾನ ಕಾರ್ಯದರ್ಶಿ ಅಬ್ದುಲ್ ಸಮದ್ ಹಾಜಿ, ಕೋಶಾಧಿಕಾರಿ ಉಸ್ಮಾನ್ ಹಾಜಿ ಏರ್ ಇಂಡಿಯಾ, ಕಾರ್ಯದರ್ಶಿ ಅದ್ದು ಹಾಜಿ, ಮುಸ್ಲಿಂ ಸೆಂಟ್ರಲ್ ಕಮಿಟಿ ಕಾರ್ಯದರ್ಶಿ ಮೊಹಮ್ಮದ್ ಹನೀಫ್ ಹಾಜಿ ಬಂದರ್, ದಾರುನ್ನೂರ್ ಸೌದಿ ಒರ್ಗನೈಸರ್ ಯೂಸುಫ್ ಕಬಕ, ಸಮಸ್ತ ಇಸ್ಲಾಮಿಕ್ ಸೆಂಟರ್ ರಾಷ್ಟ್ರೀಯ ಸಮಿತಿ ಸಂಘಟನಾ ಕಾರ್ಯದರ್ಶಿ ಸೈದಲವಿ ಫೈಝಿ, SIC ರಿಯಾದ್ ಕೇಂದ್ರ ಸಮಿತಿ ಕಾರ್ಯಾಧ್ಯಕ್ಷರಾದ ಶಾಫಿ ದಾರಿಮಿ, SIC ಮಜಲಿಸುನ್ನೂರ್ ಅಮೀರ್ ಬಶೀರ್ ಫೈಝಿ ಮುಖ್ಯ ಅಥಿತಿಗಳಾಗಿದ್ದರು.
ದಾರುನ್ನೂರ್ ರಿಯಾದ್ ಸಮಿತಿ ಕಾರ್ಯದರ್ಶಿ ಸಿರಾಜ್ ತೋಡಾರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಕರ್ನಾಟಕ ರಾಜ್ಯ SKSSF ಸದಸ್ಯ ಬಶೀರ್ ಅರಂಬೂರು ಸ್ವಾಗತಿಸಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.