ಶಿವಮೊಗ್ಗ (ವಿಶ್ವ ಕನ್ನಡಿಗ ನ್ಯೂಸ್) : ನಗರದ ಕುವೆಂಪು ರಸ್ತೆಯಲ್ಲಿರುವ ಹೋಟೆಲ್ ಒಂದರಲ್ಲಿ ಆಯೋಜಿಸಲಾಗಿದ್ದ ‘ಲೇಟ್ ನೈಟ್ ಲೇಡಿಸ್ ಪಾರ್ಟಿ’ಯನ್ನು ಬಜರಂಗದಳದ ಕಾರ್ಯಕರ್ತರು ತೀವ್ರ ವಿರೋಧ ವ್ಯಕ್ತಪಡಿಸಿ ತಡೆದಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಂಡಿದ್ದಾರೆ.
ತಡರಾತ್ರಿ ಆಯೋಜಿಸಲಾದ ಪಾರ್ಟಿಗೆ ಬಜರಂಗದಳದ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ ನಂತರ ಹಲವು ಮಹಿಳೆಯರು, ಪುರುಷರು ಮತ್ತು ಕೆಲವು ಮಕ್ಕಳು ಹೋಟೆಲ್ ನಿಂದ ಹೊರಗೆ ಬರುತ್ತಿರುವುದು ಕಂಡುಬಂದಿದೆ.
ಮಹಿಳೆಯರ ಲೇಟ್ ನೈಟ್ ಪಾರ್ಟಿ ನಡೆಯಲಿರುವ ಬಗ್ಗೆ ವಾರದ ಹಿಂದೆಯೇ ಪೊಲೀಸರ ಗಮನಕ್ಕೆ ತಂದಿದ್ದೆವು. ಮಲೆನಾಡು ಭಾಗದಲ್ಲಿ ಇಂತಹ ಪಾರ್ಟಿಗಳನ್ನು ಆಯೋಜಿಸಬಾರದು. ಆದರೆ, ಆಕ್ಷೇಪದ ನಡುವೆಯೂ ಪಾರ್ಟಿ ಆಯೋಜಿಸಲಾಗಿತ್ತು. ನಾವು ಪೊಲೀಸರೊಂದಿಗೆ ಹೋಗಿ ಪಾರ್ಟಿಯನ್ನು ನಿಲ್ಲಿಸಿದೆವು ಎಂದು ಬಜರಂಗದಳದ ಮುಖಂಡ ಹೇಳಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.