ಶಿಡ್ಲಘಟ್ಟ (ವಿಶ್ವ ಕನ್ನಡಿಗ ನ್ಯೂಸ್): ಕೇಂದ್ರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ಸಹಿತ ಎಲ್ಲರ ಕಲ್ಯಾಣಕ್ಕಾಗಿ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಿದ್ದು ಅದೇ ರೀತಿಯಲ್ಲಿ ಸರ್ವ ಜನಾಂಗದ ಕಲ್ಯಾಣಕ್ಕಾಗಿ ರಾಜ್ಯ ಬಿಜೆಪಿ ಸರ್ಕಾರ ಕಾರ್ಯನಿರ್ವಹಿಸಿದೆ ಹೀಗಾಗಿ ಕರ್ನಾಟಕದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಕೇಂದ್ರ ಉಕ್ಕು ಮತ್ತು ಗ್ರಾಮೀಣಾಭಿವೃದ್ಧಿ ರಾಜ್ಯ ಸಚಿವ ಫಗ್ಗನ್ ಸಿಂಗ್ ಕುಲಾಸ್ತೆ ವಿಶ್ವಾಸ ವ್ಯಕ್ತಪಡಿಸಿದರು.
ನಗರದ ಬಿಜೆಪಿ ಕಚೇರಿಗೆ ಭೇಟಿ ನೀಡಿ ಪಕ್ಷ ಸಂಘಟನೆಗಾಗಿ ಮತ್ತು ವಿಧಾನಸಭಾ ಚುನಾವಣೆಗೆ ಕೈಗೊಂಡಿರುವ ಸಿದ್ದತೆಗಳನ್ನು ವೀಕ್ಷಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಸಬ್ ಕಾ ವಿಶ್ವಾಸ್ ಸಬ್ ಕಾ ಪ್ರಯಾಸ್ ಎಂಬ ಘೋಷಣೆಯೊಂದಿಗೆ ಎಲ್ಲರ ಕಲ್ಯಾಣಕ್ಕಾಗಿ ಶ್ರಮಿಸಿ ವಿಶ್ವದಲ್ಲಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಅದೇ ಮಾರ್ಗದಲ್ಲಿ ಕರ್ನಾಟಕದಲ್ಲಿ ಸಹ ರೈತರು, ಕೂಲಿ ಕಾರ್ಮಿಕರು, ಮಹಿಳೆಯರು ಸಹಿತ ಎಲ್ಲರ ವರ್ಗಗಳ ಕಲ್ಯಾಣಕ್ಕಾಗಿ ಬಿಜೆಪಿ ಸರ್ಕಾರ ಅನೇಕ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಿದ ಕರ್ನಾಟಕದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಲ್ಯಾಣಕ್ಕಾಗಿ ಮೀಸಲಾತಿ ಸೌಲಭ್ಯವನ್ನು ಹೆಚ್ಚಿಸಿದ ಸರ್ಕಾರ ದೇಶದಲ್ಲಿ ಯಾವುದಾದರೂ ಸರ್ಕಾರ ಇದ್ರೆ ಅದು ಕರ್ನಾಟಕದ ಬಿಜೆಪಿ ಸರ್ಕಾರ ಎಂದು ಬಣ್ಣಿಸಿ ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಪ್ರತ್ಯೇಕ ನಿಗಮಗಳನ್ನು ಸ್ಥಾಪಿಸಿ ಅದಕ್ಕೆ ಶಕ್ತಿ ತುಂಬುವ ಕೆಲಸವನ್ನು ಸರ್ಕಾರ ಮಾಡಿದೆ ಸರ್ಕಾರದ ಸಾಧನೆಗಳನ್ನು ನೋಡಿ ಬಿಜೆಪಿಯನ್ನು ಬೆಂಬಲಿಸಿ, ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ರಚಿಸಲು ಆಶೀರ್ವದಿಸಬೇಕೆಂದು ಮನವಿ ಮಾಡಿದರು.
ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಸೀಕಲ್ ರಾಮಚಂದ್ರಗೌಡ ಅವರ ನೇತೃತ್ವದಲ್ಲಿ ಬಿಜೆಪಿ ಬಲಿಷ್ಠವಾಗುತ್ತಿದೆ ಕ್ಷೇತ್ರದಲ್ಲಿ ಕಮಲ ಅರಳಿಸುವ ಮೂಲಕ ಬದಲಾವಣೆ ತರಬೇಕೆಂದು ಮನವಿ ಮಾಡಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆಗಳನ್ನು ಜನರಿಗೆ ಮನವರಿಕೆ ಮಾಡುವ ಕೆಲಸವನ್ನು ಮಾಡಬೇಕೆಂದು ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಉದ್ಯಮಿ ಹಾಗೂ ಬಿಜೆಪಿ ಟಿಕೇಟ್ ಆಕಾಂಕ್ಷಿ ಸೀಕಲ್ ರಾಮಚಂದ್ರಗೌಡ, ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಸತ್ಯನಾರಾಯಣ ಮಹೇಶ್, ಗ್ರಾಮಾಂತರ ಮಂಡಲ ಅಧ್ಯಕ್ಷ ಸುರೇಂದ್ರ ಗೌಡ, ನಗರ ಮಂಡಲ ಅಧ್ಯಕ್ಷ ರಾಘವೇಂದ್ರ, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ಲೀಲಾವತಿ ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿ ನರ್ಮದಾ ರೆಡ್ಡಿ, ಚಿಂತಾಮಣಿ ಬಿಜೆಪಿ ಮುಖಂಡ ಅರುಣ್ ಕುಮಾರ್,ನಂದೀಶ್ ಮತ್ತಿತರರು ಉಪಸ್ಥಿತರಿದ್ದರು.
ವರದಿ:ತೇ.ಮೀಂ.ಅನ್ಸಾರಿ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.