ಚಿಕ್ಕಬಳ್ಳಾಪುರ,(ವಿಶ್ವ ಕನ್ನಡಿಗ ನ್ಯೂಸ್): ಜಿಲ್ಲೆಗೆ ಹೊಂದಿಕೊಂಡಿರುವ ಅಂತರ್ ರಾಜ್ಯ ಗಡಿ ಜಿಲ್ಲೆಗಳಲ್ಲಿ ಅಕ್ರಮವಾಗಿ ಸಾಗಿಸುವ, ದಾಸ್ತಾನು ಮಾಡುವ ಹಣ ಹಾಗೂ ಅಕ್ರಮವಾಗಿ ಖರೀದಿಸುವ ಮದ್ಯ ಹಾಗೂ ಇನ್ನಿತರ ವಸ್ತುಗಳ ವಿವರಗಳ ಬಗ್ಗೆ ಸುಳಿವು ಸಿಕ್ಕ ಕೂಡಲೇ ಚಿಕ್ಕಬಳ್ಳಾಪುರ ಜಿಲ್ಲಾಡಳಿತಕ್ಕೆ ಮಾಹಿತಿ ನೀಡುವಂತೆ ಹಾಗೂ ಸೂಕ್ತ ಕಾನೂನು ಕ್ರಮಕ್ಕೆ ಒಳಪಡಿಸಲು ಪ್ರಕರಣ ದಾಖಲಿಸುವಂತೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಎನ್. ಎಂ ನಾಗರಾಜ್ ಮನವಿ ಮಾಡಿದರು.
2023ರ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಸತ್ಯಸಾಯಿ ಜಿಲ್ಲೆಯ ಚಿಲಮತ್ತೂರಿನಲ್ಲಿ ನಡೆದ ಅಂತರ್ ರಾಜ್ಯ ಗಡಿ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಇತರ ಅಧಿಕಾರಿಗಳೊಂದಿಗೆ “ಚುನಾವಣಾ ಪೂರ್ವ ಸಭೆ” ನಡೆಸಿ ಚುನಾವಣೆ ಸಂಬಂಧ ಅಗತ್ಯ ಸಹಕಾರ ಕೋರಿದರು.
ಮುಂಬರುವ ಮೇ ತಿಂಗಳಿನಲ್ಲಿ ಕರ್ನಾಟಕ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಇದ್ದು, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿಯೂ ಚುನಾವಣೆ ನಡೆಯಲಿದೆ ಈ ಹಿನ್ನಲೆಯಲ್ಲಿ ತಮ್ಮ ಜಿಲ್ಲೆಗಳಿಂದ ಚಿಕ್ಕಬಳ್ಳಾಪುರ ಜಿಲ್ಲೆಗೆ ಅಕ್ರಮ,ಮದ್ಯ, ಇತರ ಉಡುಗೊರೆ ನೀಡುವಂತಹ ,ಆಮಿಷವೊಡ್ಡುವಂತಹ ವಸ್ತುಗಳನ್ನು ನಮ್ಮ ಜಿಲ್ಲೆಗೆ ಸಾಗಿಸುವ, ದಾಸ್ತಾನು ಮಾಡುವಂತಹ ಸಾಧ್ಯತೆಗಳಿರುತ್ತವೆ ಅಂತಹ ಅಕ್ರಮ ಚಟುವಟಿಕೆಗಳನ್ನು ಸಂಪೂರ್ಣವಾಗಿ ತಡೆಯುವ ಸಂಬಂಧ ಅಗತ್ಯ ಸಲಹೆ, ಸೂಚನೆಗಳನ್ನು ನೀಡಿ ಅಂತರಾಜ್ಯ ಗಡಿ ಜಿಲ್ಲೆಗಳಾದ ಸತ್ಯಸಾಯಿ ಮತ್ತು ಅನ್ನಮಯ್ಯ ಜಿಲ್ಲೆಗಳ ಅಧಿಕಾರಿಗಳಿಂದ ಸಹಕಾರ ಕೋರಿದರು.
ಸಭೆಯಲ್ಲಿ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಡಿ.ಎಲ್ ನಾಗೇಶ್ ಮಾತನಾಡಿ ತಮ್ಮ ಜಿಲ್ಲೆಗಳಲ್ಲಿ ಅಕ್ರಮ ಕೃತ್ಯಗಳಲ್ಲಿ ಭಾಗಿಯಾಗಿರುವವರ, ಸೂಕ್ಷ್ಮ ಪ್ರದೇಶಗಳ ಹಾಗೂ ರೌಡಿಶೀಟರ್ಗಳ ಪಟ್ಟಿಯನ್ನು ಒದಗಿಸುವಂತೆ ಮನವಿ ಮಾಡಿದರು ಜೊತೆಗೆ ತಮ್ಮ ಜಿಲ್ಲೆಗಳಲ್ಲಿ 10 ಕಡೆ ಚೆಕ್ ಪೋಸ್ಟ್ ಗಳನ್ನು ತೆರೆಯಲು ಅಗತ್ಯ ಸಹಕಾರ ನೀಡುವಂತೆ ಹಾಗೂ ಚುನಾವಣಾ ಅಕ್ರಮಗಳನ್ನು ತಡೆಯಲು ಜಂಟಿ ಕಾರ್ಯಚರಣೆ, ದಾಳಿಗಳನ್ನು ನಡೆಸಲು ಅಂತರ್ ರಾಜ್ಯ ಗಡಿ ಜಿಲ್ಲೆಗಳ ಅಧಿಕಾರಿಗಳಲ್ಲಿ ಮನವಿ ಮಾಡಿದರು ಕೂಡಲೇ ಅಂತರ್ ರಾಜ್ಯ ಗಡಿ ಜಿಲ್ಲೆಗಳ ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಿ ಅಗತ್ಯ ಮಾಹಿತಿಯನ್ನು ಹಾಗೂ ದೂರವಾಣಿಗಳ ವಿವರಗಳನ್ನು ನೀಡಿ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು ನೀಡಿದರು.
ಸಭೆಯಲ್ಲಿ ಸತ್ಯಸಾಯಿ ಜಿಲ್ಲೆಯ ಜಿಲ್ಲಾಧಿಕಾರಿ ಪಿ. ಬಸಂತ್ ಕುಮಾರ್, ಪೆÇಲೀಸ್ ವರಿಷ್ಠಾಧಿಕಾರಿ ರಾಹುಲ್ ದೇವ ಸಿಂಗ್, ಅಪರ ಜಿಲ್ಲಾಧಿಕಾರಿ ಚೇತನ್ ಹಾಗೂ ಅನ್ನಮಯ್ಯ ಜಿಲ್ಲೆಯ ಜಿಲ್ಲಾಧಿಕಾರಿ ಪಿ.ಎಸ್ ಗಿರೀಶ್, ಪೆÇಲೀಸ್ ವರಿಷ್ಠಾಧಿಕಾರಿ ವಿ ಹರ್ಷವರ್ಧನ್ ರಾಜು, ಪೆನುಗೊಂಡ ಉಪವಿವಾಧಿಕಾರಿ ಕೆ. ಕಾರ್ತಿಕ್, ಚಿಕ್ಕಬಳ್ಳಾಪುರ ಉಪ ವಿಭಾಗಾಧಿಕಾರಿ ಡಾ. ಸಂತೋಷ್ ಕುಮಾರ್, ಉಪ ಪೊಲೀಸ್ ವರಿಷ್ಠಾಧಿಕಾರಿಗಳಾದ ವಾಸುದೇವ್, ಕುಶಾಲ್ ಚೌಕ್ಸೆ, ಆಹಾರ ಇಲಾಖೆಯ ಜಂಟಿ ನಿರ್ದೇಶಕಿ ಸವಿತಾ ಸೇರಿದಂತೆ ಅಂತರಾಜ್ಯ ಜಿಲ್ಲೆಗಳ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.
ವರದಿ: ತೇ.ಮೀಂ.ಅನ್ಸಾರಿ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.