ಮಡಿಕೇರಿ (ವಿಶ್ವ ಕನ್ನಡಿಗ ನ್ಯೂಸ್) : ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಶಿವರಹಳ್ಳಿ ಗ್ರಾಮದಲ್ಲಿ ಏಳನೇ ತರಗತಿಯ ವಿದ್ಯಾರ್ಥಿನಿ ತನ್ನ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೈದ ಘಟನೆ ನಡೆದಿದೆ. ಶಿವರಹಳ್ಳಿ ಗ್ರಾಮದ ಜಿತೇಂದ್ರ-ಅಕ್ಷತಾ ದಂಪತಿಯ ಪುತ್ರಿ ವೈಷ್ಣವಿ (13) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಈಕೆ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.
ಸೊಮವಾರಪೇಟೆಯ ಖಾಸಗಿ ಶಾಲೆಯಲ್ಲಿ 7 ತರಗತಿ ಓದುತ್ತಿದ್ದ ವೈಷ್ಣವಿ, ಪರೀಕ್ಷೆ ಆರಂಭವಾದ ಒಂದು ವಾರದಿಂದಲೂ ತೀವ್ರ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ಈ ಬಗ್ಗೆ ಮನೆಯವರು ಕೇಳಿದ್ದರೂ ಯಾವುದನ್ನೂ ಹೇಳಿಕೊಂಡಿರಲಿಲ್ಲ ಎಂದು ತಿಳಿದುಬಂದಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಶನಿವಾರಸಂತೆ ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿದೆ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.