ಪುತ್ತೂರು (ವಿಶ್ವ ಕನ್ನಡಿಗ ನ್ಯೂಸ್) : ಹಾವು ಕಡಿದ ಅಮ್ಮನನ್ನು ತನ್ನ ಜೀವ ಒತ್ತೆ ಇಟ್ಟು ಕಾಪಾಡಿದ ಮಗಳ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ. ಪುತ್ತೂರು ತಾಲೂಕಿನ ಮಾಡಾವು ಎಂಬಲ್ಲಿ ಈ ಘಟನೆ ನಡೆದಿದೆ.
ಕೆಯ್ಯೂರು ಗ್ರಾಮ ಪಂಚಾಯತ್ ಸದಸ್ಯೆ ಮಮತಾ ರೈ ಎಂಬವರು ತಮ್ಮ ಅಡಿಕೆ ತೋಟದಲ್ಲಿ ಕೆಲಸ ಮಾಡುತಿದ್ದ ವೇಳೆ ಆಕಸ್ಮಿಕವಾಗಿ ನಾಗರ ಹಾವೊಂದು ಕಡಿದಿದೆ. ತನ್ನ ಅಮ್ಮನಿಗೆ ಹಾವು ಕಡಿದ ವೇಳೆ ಅವರ ಮಗಳು ಶ್ರಮ್ಯ ರೈ ಎಂಬ ಯುವತಿಯೊಬ್ಬರು ತಾಯಿಗೆ ಧೈರ್ಯ ತುಂಬಿ ಬಾಯಿಂದ ಕಚ್ಚಿ ವಿಷವನ್ನು ತೆಗೆದು ಪ್ರಥಮ ಚಿಕಿತ್ಸೆ ನೀಡಿ ತಾಯಿಯನ್ನು ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ. ಬಳಿಕ ಮಮತಾ ರೈ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ಇದೀಗ ಅವರು ಚೇತರಿಸಿಕೊಂಡಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.