(ವಿಶ್ವ ಕನ್ನಡಿಗ ನ್ಯೂಸ್) : ಭಾರತ ದೇಶ ಎಲ್ಲರಿಗೂ ಸೇರಿದ್ದು, ಕೇವಲ ಎರಡ್ಮೂರು ಮಂದಿಗೆ ಸೇರಿದ್ದಲ್ಲ, ಅಥವಾ ಅದಾನಿಯವರದ್ದಲ್ಲ. ದೇಶದಲ್ಲಿ ಬಿಜೆಪಿಯ ಮಿತ್ರರಾದ ಆಯ್ದ ಜನರಿಗೆ ಎಲ್ಲಾ ಲಾಭಗಳು ಸಿಗುತ್ತಿವೆ. ಇದುವೇ ಭ್ರಷ್ಟಾಚಾರಕ್ಕೆ ಕಾರಣ. ಕರ್ನಾಟಕದ ಸರ್ಕಾರವು ದೇಶದಲ್ಲೇ ಅತ್ಯಂತ ಭ್ರಷ್ಟ ಸರ್ಕಾರ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಬೆಳಗಾವಿಯಲ್ಲಿ ನಡೆದ ‘ಯುವ ಕ್ರಾಂತಿ’ ಸಮಾವೇಶದಲ್ಲಿ ಮಾತನಾಡಿದ ಅವರು, ಭಾರತ ಅದಾನಿಯವರದ್ದಲ್ಲ. ಬದಲಿಗೆ ರೈತರ, ಯುವಕರ ದೇಶ. ಈ ದೇಶದಲ್ಲಿ ಇಂದು ದ್ವೇಷವನ್ನು ಬಿತ್ತಲಾಗುತ್ತಿದೆ. ರಾಜ್ಯ ಸರ್ಕಾರ ಯುವಕರಿಗೆ ಉದ್ಯೋಗ ನೀಡುತ್ತಿಲ್ಲ. ರಾಜ್ಯದಲ್ಲಿ ಗುತ್ತಿಗೆದಾರರ ಬಳಿ ಶೇ 40ರಷ್ಟು ಕಮಿಷನ್ ಪಡೆಯುತ್ತಿದ್ದಾರೆ. ಈ ಬಗ್ಗೆ ಪ್ರಧಾನಿ ನರೇಂದ್ರ ಕ್ರಮಕೈಗೊಂಡಿಲ್ಲ ಎಂದು ಹೇಳಿದರು. ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದರೆ ಪದವೀಧರರಿಗೆ 3000 ರೂ., ಡಿಪ್ಲೊಮಾ ಹೊಂದಿರುವವರಿಗೆ 2 ವರ್ಷಕ್ಕೆ 1500 ರೂ. ಮಾಸಿಕ ನಿರುದ್ಯೋಗ ಭತ್ಯೆ ನೀಡಲಿದ್ದೇವೆ ಎಂದು ಈ ಸಂದರ್ಭದಲ್ಲಿ ಅವರು ಘೋಷಿಸಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.