(ವಿಶ್ವ ಕನ್ನಡಿಗ ನ್ಯೂಸ್) : ಭಾರತ ಮತ್ತು ಪಾಕಿಸ್ತಾನ ನಡುವಿನ ಕ್ರಿಕೆಟ್ ಬಾಂಧವ್ಯವನ್ನು ಮರುಸ್ಥಾಪಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡುವುದಾಗಿ ಪಾಕಿಸ್ತಾನದ ಮಾಜಿ ನಾಯಕ ಶಾಹಿದ್ ಅಫ್ರಿದಿ ಹೇಳಿದ್ದಾರೆ. ಪ್ರಸ್ತುತ ಉಭಯ ದೇಶಗಳು ಐಸಿಸಿ ಮತ್ತು ಎಸಿಸಿ ಟೂರ್ನಿಗಳಲ್ಲಿ ಮಾತ್ರ ಮುಖಾಮುಖಿಯಾಗುತ್ತಿವೆ.
ಏಷ್ಯಾಕಪ್ ಮೈದಾನದ ವಿವಾದವೂ ಉಭಯ ದೇಶಗಳ ನಡುವೆ ಬಗೆಹರಿದಿಲ್ಲ. ಭಾರತ ಸರ್ಕಾರದ ಅನುಮತಿ ಇಲ್ಲದೆ ಬಿಸಿಸಿಐ ಏನನ್ನೂ ಮಾಡುವಂತಿಲ್ಲ. ಏತನ್ಮಧ್ಯೆ, ಉಭಯ ದೇಶಗಳ ನಡುವಿನ ಕ್ರಿಕೆಟ್ ಸಂಬಂಧವನ್ನು ಪುನಃಸ್ಥಾಪಿಸಲು ಆಫ್ರಿದಿ ಒತ್ತಾಯಿಸಿದ್ದಾರೆ.
ಈ ನಿಟ್ಟಿನಲ್ಲಿ ನರೇಂದ್ರ ಮೋದಿ ಅವರು ಉಪಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡುವುದಾಗಿ ಹೇಳಿದ ಆಫ್ರಿದಿ, ಪಿಸಿಬಿ ಸ್ನೇಹಕ್ಕೆ ಸಿದ್ಧವಾಗಿದ್ದರೂ ಬಿಸಿಸಿಐ ಮಾತುಕತೆಗೆ ಸಿದ್ಧವಿಲ್ಲ ಎಂದು ತಿಳಿಸಿದರು. ಬಿಸಿಸಿಐ ಬಲಿಷ್ಠ ಕ್ರಿಕೆಟ್ ಮಂಡಳಿಯಾಗಿದ್ದು, ಬಿಸಿಸಿಐ ತನ್ನ ಜವಾಬ್ದಾರಿಯನ್ನು ಪ್ರದರ್ಶಿಸಬೇಕು ಮತ್ತು ಶತ್ರುಗಳನ್ನು ಮಾಡಿಕೊಳ್ಳುವ ಬದಲು ಸ್ನೇಹಿತರನ್ನು ಮಾಡಿಕೊಳ್ಳಲು ಪ್ರಯತ್ನಿಸಬೇಕು, ಆಗ ಬಿಸಿಸಿಐ ಬಲಿಷ್ಠವಾಗುತ್ತದೆ ಎಂದು ಆಫ್ರಿದಿ ಹೇಳಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.