ಕುಣಿಗಲ್ (ವಿಶ್ವ ಕನ್ನಡಿಗ ನ್ಯೂಸ್) : ಪಟ್ಟಣದ ರಾಜ್ಯ ಹೆದ್ದಾರಿ 33 ಚಿಕ್ಕಕರೆ ಸೇತುವೆ ಸಮೀಪ ಬೈಕ್ ಅವಘಡದಲ್ಲಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ನಡೆದಿದೆ. ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿ ವಾಸಿ ಇಂಜಿನಿಯರ್ ಚೇತನ್( 28) ಕೋಟೆ ಪ್ರದೇಶದ ವಾಸಿ ಕಿರಣ್(19) ಮೃತಪಟ್ಟವರು.
ಚೇತನ್ ಹಾಗೂ ಕಿರಣ್ ಕುಣಿಗಲ್ ಪಟ್ಟಣದ ಮಾರ್ಗವಾಗಿ ಹುಲಿಯೂರುದುರ್ಗ ಕಡೆ ಬೈಕ್ ನಲ್ಲಿ ಹೊಗುತ್ತಿದ್ದ ವೇಳೆ ಬೈಕ್ ಅಪಘಾತವಾಗಿದೆ. ಚೇತನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಿರಣ್ ಗೆ ತೀವ್ರವಾಗಿ ಗಾಯಗೊಂಡು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಅದಿಚುಂಚನಗಿರಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.