ಮಡಿಕೇರಿ (ವಿಶ್ವ ಕನ್ನಡಿಗ ನ್ಯೂಸ್) ; ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕರಡಿಗೋಡು ಗ್ರಾಮದಲ್ಲಿ ಬುಧವಾರ ರಾತ್ರಿ ಮನೆಯಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಉಂಗುರ ನುಂಗಿದ್ದ ಎಂಟು ತಿಂಗಳ ಮಗು ಮೃತಪಟ್ಟಿರುವ ಘಟನೆ ನಡೆದಿದೆ. ಮುನೀರ್ ಎಂಬವರ ಮಗು ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಉಂಗುರ ನುಂಗಿದ ಬಳಿಕ ಅಸ್ವಸ್ಥರಾದ ಮಗುವನ್ನು ತಕ್ಷಣ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದರೂ ಉಸಿರಾಟದ ಸಮಸ್ಯೆಯಿಂದಾಗಿ ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಮಡಿಕೇರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮೂಲಕ ಉಂಗುರವನ್ನು ಹೊರತೆಗೆಯಲಾಗಿದೆ.ಆದರೆ ಮಗು ಬೆಳಗ್ಗೆ ಮೃತಪಟ್ಟಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.