ಕಾರ್ಕಳ (ವಿಶ್ವ ಕನ್ನಡಿಗ ನ್ಯೂಸ್) : ಕಾರ್ಕಳವೂ ಸೇರಿದಂತೆ ರಾಜ್ಯಾದ್ಯಂತ ನಡೆಯುತ್ತಿರುವ ಭ್ರಷ್ಟಾಚಾರವನ್ನು ಪ್ರಧಾನಿ ಮೋದಿಯ ತನಕ ಕೊಂಡೊಯ್ಯುವೆ. ಹಿಂದುತ್ವ ಸಂರಕ್ಷಣೆ ಮತ್ತು ಭ್ರಷ್ಟಾಚಾರಕ್ಕೆ ಕಡಿವಾಣವೇ ನನ್ನ ಸ್ಪರ್ಧೆಯ ಉದ್ದೇಶ ಎಂದು ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಪಡುಕಟ್ಟೆ ಕೆರೆಯ ಅಭಿವೃದ್ಧಿ ಸೇರಿದಂತೆ ಹಲವು ಯೋಜನೆಗಳಲ್ಲಿ ಅವ್ಯವಹಾರ ನಡೆದಿದೆ. ಕ್ರಷರ್ ಒಂದರ ಮೇಲೆ ದಾಳಿ ನಡೆಸಿ ವಶ ಪಡಿಸಿಕೊಂಡ 2 ಲಾರಿಗಳನ್ನು ಪ್ರಭಾವಿಗಳ ಒತ್ತಡಕ್ಕೆ ಮಣಿದು ಬಿಟ್ಟು ಕಳುಹಿಸಲಾಗಿದೆ. ಆ ವ್ಯಾಪ್ತಿಯ ಶಿರಸ್ತೇದಾರರನ್ನು ನಿಯಮಬಾಹಿರವಾಗಿ ವರ್ಗಾಯಿಸಲಾಗಿದೆ.
ಅಲ್ಲದೇ ಪುರಸಭೆ ವ್ಯಾಪ್ತಿಯಲ್ಲಿ ಹಳೆಯ ದೇವಸ್ಥಾನದ ಬಳಿ ನಿಯಮ ಸ್ಥಳೀಯಾಡಳಿತದ ಆದೇಶವನ್ನೂ ಲೆಕ್ಕಿಸದೆ ಕಟ್ಟಡ ನಿರ್ಮಿಸಲಾಗುತ್ತಿದೆ. ಜಲಜೀವನ್ ಮಿಷನ್ ಯೋಜನೆಯಡಿ ನೀರೆ ಗ್ರಾಮದಲ್ಲಿ 25 ಮನೆಗಳಿಗೆ ಮಾತ್ರ ಪೈಪ್ ಹಾಕಿ, 80 ಮನೆಗಳಿಗೆ ಕಲ್ಪಿಸಿರುವುದಾಗಿ 35 ಲಕ್ಷ ರೂ. ಬಿಲ್ ಮಾಡಲಾಗಿದೆ. ಇದೇ ರೀತಿ ಹಲವೆಡೆ ಅವ್ಯವಹಾರ ನಡೆದಿರುವ ಬಗ್ಗೆ ಸಂಶಯ ಇದೆ ಎಂದು ಪ್ರಮೋದ್ ಮುತಾಲಿಕ್ ಹೇಳಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.