ರಾಜ್ಘಾಟ್ (ವಿಶ್ವ ಕನ್ನಡಿಗ ನ್ಯೂಸ್) ; ಈ ದೇಶದ ಪ್ರಧಾನಿ ಒಬ್ಬ ಹೇಡಿ. ಹೌದು, ನನ್ನ ವಿರುದ್ಧ ಕೇಸು ಹಾಕಿ ನನ್ನನ್ನೂ ಜೈಲಿಗೆ ಹಾಕಿ. ನನ್ನ ಸಹೋದರ ದೇಶದ ಹೆಮ್ಮೆ ಮತ್ತು ಈ ಪ್ರಧಾನಿ ಹೇಡಿ, ನೀವು ಸಂಸತ್ತಿನಲ್ಲಿ ನನ್ನ ಹುತಾತ್ಮ ತಂದೆಯನ್ನು ಅವಮಾನಿಸುತ್ತೀರಿ. ನೀವು ಅವರ ಮಗನನ್ನು ಮೀರ್ ಜಾಫರ್ ಎಂದು ಕರೆಯುತ್ತೀರಿ. ನೀವು ನನ್ನ ತಾಯಿಯನ್ನು ಅವಮಾನಿಸುತ್ತಿದ್ದೀರಿ. ನಿಮ್ಮ ಸಿಎಂ ಒಬ್ಬರು ರಾಹುಲ್ ಗಾಂಧಿಗೆ ಅವರ ತಂದೆ ಯಾರೆಂದು ಸಹ ತಿಳಿದಿಲ್ಲ ಎಂದು ಹೇಳುತ್ತಾರೆ ಎಂದು ರಾಹುಲ್ ಗಾಂಧಿಯನ್ನು ಅನರ್ಹಗೊಳಿಸಿರುವ ಕ್ರಮ ವಿರೋಧಿಸಿ ರಾಜ್ಘಾಟ್ನಲ್ಲಿ ನಡೆಯುತ್ತಿರುವ ಕಾಂಗ್ರೆಸ್ನ ಅಹೋರಾತ್ರಿ ಸತ್ಯಾಗ್ರಹದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಗಾಂಧಿ ಕುಟುಂಬದವರು ನೆಹರೂ ಸರ್ನೇಮ್ ಬಳಸಬೇಕು ಎಂದು ನಿಮ್ಮ ಪ್ರಧಾನಿ ಇಡೀ ಕುಟುಂಬವನ್ನು ಅವಮಾನಿಸುತ್ತಾರೆ. ಆದರೆ ಅವರ ವಿರುದ್ಧ ಯಾವುದೇ ಪ್ರಕರಣ ಇಲ್ಲ. ಯಾರೂ ನಿಮ್ಮನ್ನು ಸಂಸತ್ತಿನಿಂದ ಹೊರಗೆ ಕರೆದೊಯ್ಯುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ನಾವು ದೀರ್ಘಕಾಲ ಮೌನವಾಗಿದ್ದೇವೆ ಎನ್ನುವ ಕಾರಣಕ್ಕೆ ಇದು ನಡೆಯುತ್ತಿದೆ. ನನ್ನ ಸಹೋದರ ಏನು ಹೇಳಿದರು? ಪ್ರಧಾನಿ ಮೋದಿ ಬಳಿ ಹೋಗಿ ಅಪ್ಪಿಕೊಂಡರು. ಸೈದ್ಧಾಂತಿಕ ಭಿನ್ನಾಭಿಪ್ರಾಯಗಳ ಹೊರತಾಗಿಯೂ ಯಾವುದೇ ದ್ವೇಷವಿಲ್ಲ ಎಂದು ಅವರು ಹೇಳಿದರು. ಆದರೆ ನೀವು ನಮ್ಮ ಸಹೋದರನ ಮೇಲೆ ದ್ವೇಷ ಕಾರುತ್ತೀದ್ದೀರಿ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದರು ಹೇಳಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.