ಮಂಗಳೂರು(www.vknews.in): ಹಿಂದುಳಿದ ವರ್ಗಗಳ 2ಬಿ ಅಡಿಯಲ್ಲಿ ಮುಸ್ಲಿಮರಿಗೆ ನೀಡುತ್ತಿದ್ದ ಶೇ 4% ರಷ್ಟು ಮೀಸಲಾತಿಯನ್ನು ರದ್ದುಗೊಳಿಸಿ ಲಿಂಗಾಯುತ ಮತ್ತು ಒಕ್ಕಲಿಗರಿಗೆ ಹಂಚಿಕೆ ಮಾಡಿದ ರಾಜ್ಯ ಸರ್ಕಾರದ ಕ್ರಮವನ್ನು ಸರಿ ಅಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ರಾದ ನಾಸೀರ್ ಲಕ್ಕಿ ಸ್ಟಾರ್ ರವರು ತೀವ್ರವಾಗಿ ಖಂಡಿಸಿದ್ದು. ಮುಸ್ಲಿಮರಿಗೆ 2B ಅಡಿಯಲ್ಲಿ ನೀಡುತ್ತಿದ್ದ ಮೀಸಲಾತಿಯನ್ನು ಕೈಬಿಟ್ಟಿರುವ ನಿರ್ದಾರವನ್ನು ಹಿಂಪಡೆಯಲು ರಾಜ್ಯದ ಮುಖ್ಯಮಂತ್ರಿಗೆ ಪತ್ರ ಬರೆಯುವುದಾಗಿ ತಿಳಿಸಿದ್ದಾರೆ. ಶೈಕ್ಷಣಿಕವಾಗಿಯೂ, ಸಾಮಾಜಿಕವಾಗಿಯೂ ಹಿಂದುಳಿದಿರುವ ಮುಸ್ಲಿಮರಿಗೆ 2ಬಿ ಅಡಿಯಲ್ಲಿ ನೀಡುತ್ತಿದ್ದ ಶೇ 4% ಮೀಸಲಾತಿ ರದ್ದತಿಯೂ ಮುಸ್ಲಿಮರನ್ನು ಶೈಕ್ಷಣಿಕವಾಗಿ ಇನ್ನಷ್ಟು ಹಿಂದೆ ತಳ್ಳಲು ಕಾರಣವಾಗುವ ಬಗ್ಗೆ ಅವರು ತೀವ್ರ ಕಳವಳ ವ್ಯಕ್ತಪಡಿಸಿದರು. 1979ರ ಏಪ್ರಿಲ್ 9ರ ಕರ್ನಾಟಕ ಹೈಕೋರ್ಟ್ ತೀರ್ಪಿನಲ್ಲಿ “ಮುಸ್ಲಿಮರು ಧಾರ್ಮಿಕ ಅಲ್ಪಸಂಖ್ಯಾತರು ಎಂಬುದು ಅವರನ್ನು ಹಿಂದುಳಿದ ವರ್ಗಗಳ ಪಟ್ಟಿಯಿಂದ ತೆಗೆಯಲು ಕಾರಣವಾಗವುದಿಲ್ಲ” ಎಂದು ಸ್ಪಷ್ಟವಾಗಿ ಆದೇಶಿಸಿದೆ ಎಂದು ಅವರು ತಿಳಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.