(www.vknews.in) ; ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲಿ ಚುನಾವಣೆ ಎನ್ನುವುದು ಹಬ್ಬವಿದ್ದಂತೆ. ಪ್ರಜೆಗಳಿಂದ, ಪ್ರಜೆಗಳಿಗಾಗಿ, ಪ್ರಜೆಗಳೇ ಪ್ರಭುಗಳನ್ನು ಆಯ್ಕೆ ಮಾಡುವ ವಿಶಿಷ್ಟ ಅವಕಾಶ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಜನರಿಗಿದೆ. ಈ ಹಿನ್ನೆಲೆಯಲ್ಲಿ ಚುನಾವಣೆಗೆ ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲಿ ಅತ್ಯಂತ ಮಹತ್ವದ ಮತ್ತು ಪಾವಿತ್ರ್ಯತೆ ಇರುತ್ತದೆ. ಈ ಕಾರಣದಿಂದ ಪಾರದರ್ಶಕ ಮತ್ತು ನಿಷ್ಪಕ್ಷಪಾತ ಚುನಾವಣೆ ನಡೆಸಲು ಆಡಳಿತ ಯಂತ್ರ ಶ್ರಮಿಸುತ್ತದೆ. ಜಿಲ್ಲಾಡಳಿತ, ಪೊಲೀಸ್ ಇಲಾಖೆ ಜೊತೆ ಗೃಹರಕ್ಷಕರು ಸೇರಿ ಚುನಾವಣಾ ಪ್ರಕ್ರಿಯೆಯನ್ನು ಅತ್ಯಂತ ನ್ಯಾಯಯುತವಾಗಿ, ಕಾನೂನು ಬದ್ಧವಾಗಿ ನಡೆಸಲು ಬದ್ಧರಾಗಿರುತ್ತಾರೆ. ಈ ಹಿನ್ನೆಲೆಯಲ್ಲಿ ಗೃಹರಕ್ಷಕರಿಗೆ ಚುನಾವಣೆ ಕರ್ತವ್ಯ ಅತ್ಯಂತ ಮಹತ್ವದ್ದಾಗಿರುತ್ತದೆ. ಎಲ್ಲಾ ಗೃಹರಕ್ಷಕರು ಪಾರದರ್ಶಕ ಚುನಾವಣೆ ನಡೆಸಲು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಗೆ ಸಹಕರಿಸಬೇಕಾಗಿದೆ ಎಂದು ದ.ಕ. ಜಿಲ್ಲಾ ಸಮಾದೇಷ್ಟರಾದ ಡಾ|| ಮುರಲೀಮೋಹನ್ ಚೂಂತಾರು ನುಡಿದರು.
ಪುತ್ತೂರು ನಗರದ ನಟರಾಜ ಸಭಾಂಗಣದಲ್ಲಿ ಪುತ್ತೂರು, ಉಪ್ಪಿನಂಗಡಿ ಮತ್ತು ಕಡಬ ಘಟಕದ ಗೃಹರಕ್ಷಕರಿಗೆ ವಿಶೇಷ ಚುನಾವಣಾ ಶಿಬಿರ ಎರಡು ದಿನಗಳ ಕಾಲ ದಿನಾಂಕ:25-03-2023 ಮತ್ತು 26-03-2023 ರಂದು ಜರುಗಿತು. ಈ ತರಬೇತಿಯನ್ನು ಜಿಲ್ಲಾ ಗೃಹರಕ್ಷಕ ದಳ ಮಂಡ್ಯ ಜಿಲ್ಲೆಯ ಸಹಾಯಕ ಭೋಧಕರಾದ ಶ್ರೀ ಶರತ್ ಎಸ್.ಜೆ. ಇವರು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಶ್ರೀ ಡಾ ಮುರಲಿ ಮೋಹನ್ ಚೂಂತಾರು ಇವರು ಉಪಸ್ಥಿತರಿದ್ದರು ಹಾಗೂ ಪುತ್ತೂರು ಘಟಕದ ಘಟಕಾಧಿಕಾರಿ ಶ್ರೀ ಅಭಿಮನ್ಯು ರೈ, ಉಪ್ಪಿನಂಗಡಿ ಘಟಕದ ಪ್ರಭಾರ ಘಟಕಾಧಿಕಾರಿ ಶ್ರೀ ದಿನೇಶ್,ಕಡಬ ಘಟಕದ ಘಟಕಾಧಿಕಾರಿ ಶ್ರೀ ತೀರ್ಥೆಶ, ಪುತ್ತೂರು ಘಟಕದ ಜಗನ್ನಾಥ್, ಸುದರ್ಶನ್ ಜೈನ್ ಇವರುಗಳು ಹಾಜರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.