ತ್ರಿಶೂರ್ (ವಿಶ್ವ ಕನ್ನಡಿಗ ನ್ಯೂಸ್) : ತ್ರಿಶೂರ್ ಮುಪ್ಲಿಯಾತ್ನಲ್ಲಿ ಅತಿಥಿ ಕಾರ್ಮಿಕರ ನಡುವೆ ನಡೆದ ಘರ್ಷಣೆಯಲ್ಲಿ ಆರು ವರ್ಷದ ಬಾಲಕನೊಬ್ಬನನ್ನ ಕಡಿದು ಹತ್ಯೆ ಮಾಡಲಾಗಿದೆ. ಅತಿಥಿ ನೌಕರನ ಮಗ ನಜೂರ್ ಇಸ್ಲಾಂ ಮೃತಪಟ್ಟಿದ್ದಾನೆ. ಬಾಲಕನ ತಾಯಿ ಕೂಡ ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮುಪ್ಲಿಯಾತ್ ವರಂಬರಪಳ್ಳಿಯಲ್ಲಿ ನಿನ್ನೆ ರಾತ್ರಿ ಈ ಘಟನೆ ನಡೆದಿದೆ. ಮಾತಿನ ಚಕಮಕಿಯಾಗಿ ಆರಂಭವಾದ ವಾಗ್ವಾದ ವಿಕೋಪಕ್ಕೆ ತಿರುಗಿ ನಂತರ ಸಶಸ್ತ್ರ ಸಂಘರ್ಷಕ್ಕೆ ತಿರುಗಿತ್ತು. ಘರ್ಷಣೆ ವೇಳೆ ಪಕ್ಕದಲ್ಲಿ ನಿಂತಿದ್ದ ಬಾಲಕ ಗಾಯಗೊಂಡಿದ್ದಾನೆ. ಚಿಂತಾಜನಕ ಸ್ಥಿತಿಯಲ್ಲಿದ್ದ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಂದು ಬೆಳಗ್ಗೆ ಮೃತಪಟ್ಟಿದೆ. ದಾಳಿಕೋರನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆತನ ಬಂಧನವನ್ನು ದಾಖಲಿಸಿಕೊಳ್ಳಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.