(www.vknews.in) ; ಮುಸ್ಲಿಮರು ಶೈಕಣಿವಾಗಿ, ಸಾಮಾಜಿಕವಾಗಿ, ಆರ್ಥಿಕವಾಗಿ ತೀರಾ ಹಿಂದುಳಿದ ಕಾರಣಕ್ಕೆ ಚಿನ್ನಪ್ಪರೆಡ್ಡಿ ಆಯೋಗದ ಶಿಫಾರಸ್ಸಿನ ಮೇರೆಗೆ ಶೇ.4 ರಷ್ಟು ಮೀಸಲಾತಿಯನ್ನು ಸರ್ಕಾರ ನೀಡಿತ್ತು. ಈ ಮೀಸಲಾತಿಯನ್ನು ಬಿಜೆಪಿ ಸರ್ಕಾರ ಕಿತ್ತು ಕೊಂಡಿರುವುದು ಘೋರ ಅನ್ಯಾಯ. ಚಿನ್ನಪ್ಪರೆಡ್ಡಿ ಆಯೋಗದ ಮೂಲಕ ಬಂದ ಸಣ್ಣದೊಂದು ಸಾಮಾಜಿಕ ನ್ಯಾಯದ ಆಶಯಕ್ಕೆ ಬೊಮ್ಮಾಯಿ ಕೊಡಲಿ ಪೆಟ್ಟು ನೀಡಿ, ಮುಸ್ಲಿಮರಿಗೆ ಅನ್ಯಾಯ ಮಾಡಿದ್ದಾರೆ.
ಎಸ್ಸಿ ಎಸ್ಟಿ ಸಮುದಾಯಗಳಿಗೆ ಒಳ ಮೀಸಲಾತಿ ಪ್ರಕಟಿಸಿರುವುದು ಸ್ವಾಗತಾರ್ಹವಾಗಿದೆ. ಆದರೆ ಈ ತನಕ ಮುಸ್ಲಿಮರಿಗೆ 2B ಅಡಿಯಲ್ಲಿ ನೀಡಲಾಗುತ್ತಿದ್ದ 4% ಮೀಸಲಾತಿಯನ್ನು ರದ್ದುಪಡಿಸಿರುವುದು ತಾರತಮ್ಯದ ಸ್ಪಷ್ಟ ನಿದರ್ಶನವಾಗಿದೆ.ಯಾವ ಸಮುದಾಯದವರು ಮುಸ್ಲಿಂ ಮೀಸಲಾತಿ ಕಿತ್ತು ನಮಗೆ ಕೊಡಿ ಎಂದು ಕೇಳಿಲ್ಲ, ಕೇವಲ ರಾಜಕಾರಣಕ್ಕಾಗಿ ಮುಸ್ಲಿಮರ ಮೀಸಲಾತಿ: ಮುನ್ನೆಲೆಗೆ ತಂದು ಮತಬ್ಯಾಂಕ್ ಸೃಷ್ಟಿಸುವ ಹುನ್ನಾರ ಬಿಜೆಪಿಯದ್ದು
ಸಂವಿಧಾನ ಬದ್ಧವಾಗಿರುವ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಜಸ್ಟೀಸ್ ಚಿನ್ನಪ್ಪರೆಡ್ಡಿ ಆಯೋಗ ಮುಸ್ಲಿಮರನ್ನು ಹಿಂದುಳಿದ ವರ್ಗದಲ್ಲಿ ಪರಿಗಣಿಸಿ ಮೀಸಲಾತಿ ನೀಡಿರುವಾಗ ಮೀಸಲಾತಿಗೆ ಸಾಂವಿಧಾನಿಕ ಪ್ರಾಮುಖ್ಯತೆ ಇದೆ ಅಂಬೇಡ್ಕರ್ ರವರ ಆಶಯದಂತೆ ಸೂಕ್ತವಾದ ರಾಜಕೀಯ ಪ್ರಾತಿನಿಧ್ಯದಿಂದ ವಂಚಿತರಾಗಿರುವ ಸಮುದಾಯವಾಗಿರುವ ಮುಸ್ಲಿಮರಿಗೆ ಧಾರ್ಮಿಕ ಅಲ್ಪಸಂಖ್ಯಾತರಿಗೆಂಬ ನಿಟ್ಟಿನಲ್ಲಿ ನೀಡಲಾಗುತ್ತಿದ್ದ ಮೀಸಲಾತಿಯನ್ನು ರದ್ದುಪಡಿಸಿರುವ ಆದೇಶವನ್ನು ಮರುಪರಿಶೀಲಿಸಬೇಕು ಎಂದು ಅರಕಲಗೂಡು ಯುವ ಕಾಂಗ್ರೆಸ್ ಮುಖಂಡ ಜೀಷಾನ್ ಆಗ್ರಹಿಸಿದ್ದಾರೆ
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.