ನವದೆಹಲಿ (ವಿಶ್ವ ಕನ್ನಡಿಗ ನ್ಯೂಸ್) : ರಾಮನವಮಿ ಆಚರಣೆ ನೆಪದಲ್ಲಿ ದೇಶಾದ್ಯಂತ ಹಿಂದುತ್ವ ಸಂಘಟನೆಗಳಿಂದ ವ್ಯಾಪಕ ಹಿಂಸಾಚಾರ ನಡೆದಿದೆ. ರಾಮನವಮಿ ಅಂಗವಾಗಿ ಆಯೋಜಿಸಿದ್ದ ಶೋಭಾ ರ್ಯಾಲಿಯಲ್ಲಿ ಬಂಗಾಳ, ಗುಜರಾತ್, ಮಹಾರಾಷ್ಟ್ರ ಮತ್ತು ದೆಹಲಿಯಲ್ಲಿ ದೊಡ್ಡ ಪ್ರಮಾಣದ ಹಿಂಸಾಚಾರಗಳು ನಡೆದಿವೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.
ಪಶ್ಚಿಮ ಬಂಗಾಳದ ಹೌರಾದಲ್ಲಿ ಹಿಂಸಾತ್ಮಕ ಹಿಂದುತ್ವ ಕಾರ್ಯಕರ್ತರು ಮಸೀದಿಗಳ ಮೇಲೆ ಕಲ್ಲು ತೂರಾಟ ನಡೆಸಿದರು ಮತ್ತು ವಾಹನಗಳಿಗೆ ಬೆಂಕಿ ಹಚ್ಚಿದರು. ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸ್ ವಾಹನಗಳಿಗೆ ಕಾರ್ಯಕರ್ತರು ಬೆಂಕಿ ಹಚ್ಚಿದ ದೃಶ್ಯಗಳನ್ನು ಎಎನ್ ಐ ಬಿಡುಗಡೆ ಮಾಡಿದೆ.
ಬಂಗಾಳದ ಗಲಭೆಯ ಹಿಂದೆ ಬಿಜೆಪಿ ಕೈವಾಡವಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಕೋಮುಗಲಭೆ ಸೃಷ್ಟಿಸಲು ಬೇರೆ ರಾಜ್ಯಗಳಿಂದ ಪಕ್ಷದ ಗೂಂಡಾಗಳನ್ನು ಕಳುಹಿಸುವ ಮೂಲಕ ಬಿಜೆಪಿ ಹಿಂಸಾಚಾರದ ನೇತೃತ್ವ ವಹಿಸಿದೆ ಎಂದು ಅವರು ಹೇಳಿದರು. ಹಿಂಸಾಚಾರದಲ್ಲಿ ಇದುವರೆಗೆ ಸುಮಾರು ಮೂವತ್ತು ಜನರನ್ನು ಬಂಧಿಸಲಾಗಿದೆ ಎಂದು ಬಂಗಾಳ ಪೊಲೀಸರನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.
ಅದೇ ರೀತಿ ಗುಜರಾತ್ನ ವಡೋದರಾ ಮತ್ತು ಮಹಾರಾಷ್ಟ್ರದ ಛತ್ರಪತಿ ಸಾಂಬಾಜಿ ನಗರದಲ್ಲಿ ಶೋಭಾ ಯಾತ್ರೆ ವೇಳೆ ಹಿಂಸಾಚಾರದ ಘಟನೆಗಳು ನಡೆದಿವೆ. ಗುಜರಾತ್ನಲ್ಲಿ ರ್ಯಾಲಿ ವಿರುದ್ಧ ಕಲ್ಲು ತೂರಾಟ ನಡೆದಿದೆ ಎಂದು ಆರೋಪಿಸಿ ವಿಎಚ್ಪಿ ಕಾರ್ಯಕರ್ತರು ಹಿಂಸಾಚಾರ ನಡೆಸಿದರು. ಪಂಚ್ರಿಗರ್ನಲ್ಲಿರುವ ಮಸೀದಿಯ ಮುಂಭಾಗದಲ್ಲಿ ಈ ದಾಳಿ ನಡೆದಿದೆ ಎಂದು ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ. ಘಟನೆಯಲ್ಲಿ 20 ಮಂದಿಯನ್ನು ಬಂಧಿಸಲಾಗಿದೆ.
ಇದೇ ವೇಳೆ ದೆಹಲಿಯಲ್ಲಿ ನಡೆದ ಶೋಭಾಯಾತ್ರೆಯಲ್ಲಿ ಪೊಲೀಸರ ನಿಷೇಧಾಜ್ಞೆ ಧಿಕ್ಕರಿಸಿ ಸಾವಿರಾರು ಮಂದಿ ಪಾಲ್ಗೊಂಡಿದ್ದರು. ಅಖಿಲ ಭಾರತೀಯ ಹಿಂದೂ ಯುವ ಮೋರ್ಚಾ ನೇತೃತ್ವದಲ್ಲಿ ಪ್ರತಿಭಟನಾ ರ್ಯಾಲಿ ಆಯೋಜಿಸಲಾಗಿತ್ತು. ಕಳೆದ ವರ್ಷ ನಡೆದ ರ್ಯಾಲಿಯಲ್ಲಿ ದೊಡ್ಡ ಪ್ರಮಾಣದ ಹಿಂಸಾಚಾರದ ಘಟನೆಗಳನ್ನು ಗಮನದಲ್ಲಿಟ್ಟುಕೊಂಡು ದೆಹಲಿ ಪೊಲೀಸರು ಈ ಬಾರಿ ರ್ಯಾಲಿಗೆ ಅನುಮತಿ ನಿರಾಕರಿಸಿದ್ದರು.
ಈ ನಡುವೆ ರಾಮನವಮಿ ವೇಳೆ ಯುವಕನೊಬ್ಬ ಮಸೀದಿ ಎದುರು ಬಜರಗದಳದ ಧ್ವಜಾರೋಹಣ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಭಜರದಳದ ಕಾರ್ಯಕರ್ತನೊಬ್ಬ ಜೈ ಶ್ರೀರಾಮ್ ಎಂದು ಕರೆದು ಧ್ವಜಾರೋಹಣ ಮಾಡುತ್ತಿರುವ ವಿಡಿಯೋ ಪೊಲೀಸರ ಸಮ್ಮುಖದಲ್ಲಿ ಹೊರಬಿದ್ದಿದೆ. ಹಿಂದುತ್ವವಾದಿಗಳು ಮಸೀದಿಗಳ ಮೇಲೆ ಕಲ್ಲು ತೂರಾಟ ನಡೆಸುತ್ತಿರುವ ವಿಡಿಯೋಗಳು ಕೂಡ ವ್ಯಾಪಕವಾಗಿ ಹರಿದಾಡುತ್ತಿವೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.