ಉಳ್ಳಾಲ (ವಿಶ್ವ ಕನ್ನಡಿಗ ನ್ಯೂಸ್) : ಕೇರಳದ ಪ್ರತಿಷ್ಠಿತ ವಿದ್ಯಾಸಂಸ್ಥೆ ಮರ್ಕಝುಸ್ಸಖಾಫತಿ ಸುನ್ನಿಯಾದ 2022-23ನೇ ಸಾಲಿನ ವಾರ್ಷಿಕ ಪರೀಕ್ಷೆಯ ಫಲಿತಾಂಶ ಹೊರಬಂದಿದ್ದು, ತಖಸ್ಸುಸ್ (ಕರ್ಮ ಶಾಸ್ತ್ರ) ವಿಭಾಗದಲ್ಲಿ ಉಳ್ಳಾಲದ ಸಯ್ಯಿದ್ ಮದನಿ ದಅವಾ ಕಾಲೇಜಿನ ಪೂರ್ವ ವಿದ್ಯಾರ್ಥಿ ಮೊಹಮ್ಮದ್ ಅಝ್ಹರುದ್ದೀನ್ ಕಾಮಿಲ್ ಸಖಾಫಿ ಮಂಜನಾಡಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.
ಸುಮಾರು ಏಳು ವರ್ಷ ಉಳ್ಳಾಲ ದಅವಾ ಕಾಲೇಜಿನಲ್ಲಿ ವ್ಯಾಸಂಗ ನಡೆಸಿ ಉನ್ನತ ವಿಧ್ಯಾಭ್ಯಾಸಕ್ಕಾಗಿ ಭಾರತದ ಪ್ರತಿಷ್ಠಿತ ವಿದ್ಯಾ ಸಂಸ್ಥೆ ಮರ್ಕಝು ಸಖಾಫತಿ ಸುನ್ನಿಯ್ಯಾದಲ್ಲಿ ಅಧ್ಯಯನ ನಡೆಸಿ ಪ್ರಥಮ ರಾಂಕ್ ಗಳಿಸುವ ಮೂಲಕ ಈ ಸಾಧನೆಯನ್ನು ಮಾಡಿದ್ದಾರೆ. ತಮ್ಮ ಊರಿನ ಹಾಗೂ ಸಂಸ್ಥೆಯ ಕೀರ್ತಿಯನ್ನು ಬೆಳಗಿಸಿದ ವಿದ್ಯಾರ್ಥಿಯನ್ನು ಉಳ್ಳಾಲ ಸಯ್ಯಿದ್ ಮದನಿ ದಅವಾ ಕಾಲೇಜಿನ ಉಸ್ತಾದ್ ಹಾಗೂ ವಿದ್ಯಾರ್ಥಿ ಯೂನಿಯನ್ ಅಲ್ ಕನಫ್ ವತಿಯಿಂದ ಅಭಿನಂದಿಸಲಾಯಿತು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.