ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಯುವಕನೊಬ್ಬ ತನ್ನ ಸಾವಿನ ಬಗ್ಗೆ ವಾಟ್ಸಾಪ್ನಲ್ಲಿ ಸ್ಟೇಟಸ್ ಹಾಕಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಡಬ ತಾಲೂಕಿನ ಇಚಿಲಂಪಾಡಿ ಗ್ರಾಮದಲ್ಲಿ ರೆನೀಷ್ (27) ಆತ್ಮಹತ್ಯೆ ಮಾಡಿಕೊಂಡವರು. ತಂದೆ-ತಾಯಿಯನ್ನು ಕಳೆದುಕೊಂಡಿದ್ದ ರೆನೀಷ್ ಮೂರು ವರ್ಷಗಳ ಹಿಂದೆ ಮಂಗಳೂರಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದರಾದರೂ ಅದು ಯಶಸ್ವಿಯಾಗಿರಲಿಲ್ಲ.
ರೆನೀಶ್ ವಿದ್ಯುತ್ ಲೈನ್ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದರು. ಶುಕ್ರವಾರ ಕೆಲಸಕ್ಕೆ ಹೋಗಿದ್ದ ಅವರು ತೀವ್ರ ಒತ್ತಡದಲ್ಲಿದ್ದರು. ನೆಲ್ಯಾಡಿ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಅಸಹಜ ಸಾವು ಪ್ರಕರಣ ದಾಖಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.