ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿ ಚರ್ಚ್ನ ಧರ್ಮಗುರು ಓರ್ವರು ವಂಚಿಸಿದ್ದಾರೆ ಎಂದು ಆರೋಪಿಸಿ ಉಡುಪಿ ಮೂಲದ ಮುಸ್ಲಿಂ ಮಹಿಳೆ ಪ್ರತಿಭಟನೆ ನಡೆಸಿದ್ದಾರೆ. ಮಹಿಳೆ ನಗರದ ಸೈಂಟ್ ಪಾಲ್ ಚರ್ಚ್ನ ಧರ್ಮಗುರು ನೋಯಲ್ ಕರ್ಕಡ ಅವರ ಮೇಲೆ ನಂಬಿಕೆ ದ್ರೋಹ, ಲೈಂಗಿಕ ಕಿರುಕುಳದ ಆರೋಪ ಹೊರಿಸಿದ್ದಾರೆ.
ಧರ್ಮಗುರು ನೋಯಲ್ ಕರ್ಕಡ ಅವರ ಪರಿಚಯ 2021ರ ಆಗಸ್ಟ್ನಲ್ಲಿ ಆಗಿದ್ದು, ಬಳಿಕ ಅವರು ಮದುವೆಯಾಗುವುದಾಗಿ ನಂಬಿಸಿ ದೈಹಿಕವಾಗಿ ಬಳಸಿಕೊಂಡಿದ್ದಾರೆ. ಕಳಸ, ಕಾಸರಗೋಡಿಗೆ ಸುತ್ತಾಡಿಸಿದ್ದಾರೆ. ಕೊಟ್ಟಾರ ದಲ್ಲಿರುವ ಕ್ವಾಟ್ರಸ್ ನಲ್ಲಿ ಇರಿಸಿಕೊಂಡು ದೈಹಿಕ ಸಂಪರ್ಕ ಮಾಡಿದ್ದಾರೆ. 2022ರ ಫೆಬ್ರವರಿ ನಂತರ ಅವರು ನನ್ನನ್ನು ದೂರ ಮಾಡಿದ್ದು, ಸಂಪರ್ಕ ಕಡಿದು ಕೊಳ್ಳಲು ಪ್ರಯತ್ನಿಸಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.
ವಾಟ್ಸ್ಆ್ಯಪ್ ಚಾಟ್ ಹಾಗೂ ನಾವು ಜೊತೆಗಿದ್ದ ವಿಡಿಯೋಗಳನ್ನು ದಾಖಲೆಯಾಗಿಟ್ಟುಕೊಂಡು ಒಡನಾಡಿ ಸಂಸ್ಥೆಯ ನೆರವು ಪಡೆದು ಪೊಲೀಸರಿಗೆ ದೂರು ನೀಡುತ್ತೇನೆ ಎಂದು ಮಹಿಳೆ ಹೇಳಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.