(ವಿಶ್ವ ಕನ್ನಡಿಗ ನ್ಯೂಸ್) : ಕ್ರಿಕೆಟ್ ಪಂದ್ಯದ ವೇಳೆ ನೋ ಬಾಲ್ ಕರೆದ ಅಂಪೈರ್ ಅನ್ನು ಫೀಲ್ಡಿಂಗ್ ತಂಡದ ಸದಸ್ಯರು ಇರಿದು ಕೊಂದಿದ್ದಾರೆ. ಭಾನುವಾರ ಒಡಿಶಾದ ಕಟಕ್ನಲ್ಲಿ ನಡೆದ ಸೌಹಾರ್ದ ಪಂದ್ಯದ ವೇಳೆ ಈ ಘಟನೆ ನಡೆದಿದೆ. 22 ವರ್ಷದ ಲಕ್ಕಿ ರೌಟ್ ಬ್ಯಾಟ್ ಮತ್ತು ಚಾಕುವಿನಿಂದ ಇರಿದು ಕೊಂದಿದ್ದಾರೆ. ಘಟನೆಯಲ್ಲಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಅಂಡರ್-18 ತಂಡಗಳ ನಡುವಿನ ಸೌಹಾರ್ದ ಪಂದ್ಯದ ವೇಳೆ ಈ ಘಟನೆ ನಡೆದಿದೆ. ವರದಿಗಳ ಪ್ರಕಾರ ಬ್ರಹ್ಮಪುರ ಮತ್ತು ಶಂಕರಪುರ ಎರಡು ತಂಡಗಳ ನಡುವೆ ಪಂದ್ಯ ನಡೆದಿತ್ತು. ಆಟವನ್ನು ನಿಯಂತ್ರಿಸುತ್ತಿದ್ದ ಲಕ್ಕಿ ರೂಟ್ ಬಾಲ್ ಅನ್ನು ನೋ ಬಾಲ್ ಎಂದು ಕರೆದರು. ಆಗ ಲಕ್ಕಿ ಮತ್ತು ಫೀಲ್ಡಿಂಗ್ ತಂಡದ ನಡುವೆ ವಾಗ್ವಾದ ನಡೆಯಿತು. ಜಗಳ ವಿಕೋಪಕ್ಕೆ ಹೋದಾಗ ಬ್ಯಾಟ್ ಹಾಗೂ ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ.
ಗಂಭೀರ ಸ್ಥಿತಿಯಲ್ಲಿದ್ದ ಲಕ್ಕಿ ಅವರನ್ನು ಎಸ್ಸಿಬಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ. ಸ್ಥಳೀಯರು ಮಧ್ಯ ಪ್ರವೇಶಿಸಿ ಆರೋಪಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಕಟಕ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.