ಕುಂದಾಪುರ (ವಿಶ್ವ ಕನ್ನಡಿಗ ನ್ಯೂಸ್) : ಕರಾವಳಿಯ ವಾಜಪೇಯಿ ಎಂದೇ ಖ್ಯಾತಿ ಪಡೆದಿದ್ದ ಸರಳ ಸಜ್ಜನಿಕೆಯ ವ್ಯಕ್ತಿ ಎಂದು ಜನಮಾನಸದಲ್ಲಿ ಗುರುತಿಸಿಕೊಂಡಿದ್ದ ಕುಂದಾಪುರ ವಿಧಾನಸಭಾ ಕ್ಷೇತ್ರದಿಂದ ಐದು ಬಾರಿ ಶಾಸಕರಾಗಿರುವ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಈ ಬಾರಿ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ.ಈ ಬಗ್ಗೆ ಪತ್ರಿಕೆ ಹೇಳಿಕೆ ನೀಡಿರುವ ಅವರು, ನಾನು ಸ್ವಇಚ್ಚೆ ಯಿಂದ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ ಎಂದು ಉಲ್ಲೇಖಿಸಿದ್ದಾರೆ.
1999 ರಿಂದ ಇಲ್ಲಿಯವರೆಗೆ ಸೋಲಿಲ್ಲದ ಸರದಾರ ಎನಿಸಿಕೊಂಡಿದ್ದ 71 ವರ್ಷದ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಅವರು ದಾಖಲೆ ಮತಗಳಿಂದ ಗೆದ್ದು ಬರುತ್ತಿದ್ದರು, ಒಮ್ಮೆ ಬಿಜೆಪಿಗೆ ರಾಜೀನಾಮೆ ಕೊಟ್ಟು ಸ್ವತಂತ್ರವಾಗಿ ಸ್ವರ್ಧಿಸಿ ವಿಧಾನಸಭೆಗೆ ಆಯ್ಕೆ ಆಗಿದ್ದರು. ಒಮ್ಮೆಲೇ ಚುನಾವಣೆ ಕಣದಿಂದ ಹಿಂದೆ ಸರದಿ ಹಾಲಾಡಿ ನಿರ್ಧಾರಕ್ಕೆ ಕಾರಣ ಗೊತ್ತಿಲ್ಲ, ಒಟ್ಟಾರೆ ಕ್ಷೇತ್ರ ಮತದಾರಗೆ, ಕಾರ್ಯಕರ್ತರಿಗೆ ಹಾಗೂ ಅಭಿಮಾನಿಗಳಿಗೆ ಮತ್ತು ಹಿತೈಷಿಗಳಿಗೆ ಈ ಸುದ್ದಿ ಅರಗಿಸಿ ಕೊಳ್ಳಲಾಗದಿರುವುದು ಅಕ್ಷರಶ ಸತ್ಯ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.