ಮುಂಬೈ (ವಿಶ್ವ ಕನ್ನಡಿಗ ನ್ಯೂಸ್) ; ಮಹಾರಾಷ್ಟ್ರದಲ್ಲಿ ಬಾಲಕಿಯೊಬ್ಬಳು ಕುದಿಯುವ ಎಣ್ಣೆಯ ಪಾತ್ರೆಗೆ ಬಿದ್ದು ದಾರುಣ ಅಂತ್ಯ ಕಂಡಿದ್ದಾಳೆ. ಆರು ವರ್ಷದ ವೈಷ್ಣವಿ ಸಮಾಧಾನ್ ಪವಾರ್ ಸಾವನ್ನಪ್ಪಿದ್ದಾರೆ. ನಾಸಿಕ್ ಜಿಲ್ಲೆಯ ಸತಾನ ತಾಲೂಕಿನ ಲಖಮಾಪುರ್ ಗ್ರಾಮದಲ್ಲಿ ಈ ದಾರುಣ ಘಟನೆ ನಡೆದಿದೆ.
ತನ್ನ ತಂದೆಯ ರೆಸ್ಟೋರೆಂಟ್ನಲ್ಲಿ ಬಿಸಿ ಎಣ್ಣೆಯ ದೊಡ್ಡ ಪಾತ್ರೆಯಲ್ಲಿ ಬಿದ್ದಾಗ ಈ ಅವಘಡ ಸಂಭವಿಸಿದೆ. ಮಗು ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಬಿಸಿ ಎಣ್ಣೆ ತುಂಬಿದ ಪಾತ್ರೆಯಲ್ಲಿ ಬಿದ್ದಿದೆ ಎಂದು ವರದಿಯಾಗಿದೆ. ತೀವ್ರ ಸುಟ್ಟಗಾಯಗಳಾಗಿದ್ದ ಬಾಲಕಿಯನ್ನು ತಂದೆ ಆಸ್ಪತ್ರೆಗೆ ಕರೆದೊಯ್ದರೂ ಜೀವ ಉಳಿಸಲಾಗಲಿಲ್ಲ. ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.