ಬೆಳ್ತಂಗಡಿ (www.vknews.in) : ಬೆಳ್ತಂಗಡಿ ತಾಲೂಕು ಉಜಿರೆ ಬಸ್ ನಿಲ್ದಾಣದಲ್ಲಿ ಸುಳ್ಳು ಕಾರಣವನ್ನು ಇಟ್ಟುಕೊಂಡು ರಿಕ್ಷಾ ಚಾಲಕರು ಮತ್ತು ಕೆಲವು ಸಂಘಪರಿವಾರದ ಕಾರ್ಯಕರ್ತರು ಹಲ್ಲೆ ನಡೆಸಿರುವುದು ಅಕ್ಷಮ್ಯ ಅಪರಾಧವಾಗಿದೆ. ಈ ಘಟನೆಯನ್ನು SDPI ತೀವ್ರವಾಗಿ ಖಂಡಿಸುತ್ತಿದೆ ಎಂದು ಪಕ್ಷದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ನವಾಝ್ ಕಟ್ಟೆ ತಿಳಿಸಿದ್ದಾರೆ.
ಸಂಘಪರಿವಾರಕ್ಕೆ ಒಂದೇ ಸಮುದಾಯವನ್ನು ಗುರಿಪಡಿಸಿ ಈ ರೀತಿಯ ಅನೈತಿಕ ಪೊಲೀಸ್ ಗಿರಿ ಮತ್ತು ಹಲ್ಲೆಗಳು ನಡೆಸುವುದು ಚಾಳಿಯಾಗಿ ಬಿಟ್ಟಿದೆ. ದ.ಕ ಜಿಲ್ಲೆಯಲ್ಲಿ ಹಲ್ಲೆ ಪ್ರಕ್ರಿಯೆಗಳು ಮರುಕಳಿಸಿದೆ. ಇಂತಹವುಗಳಿಗೆ ಜಿಲ್ಲೆಯ ಪೊಲೀಸ್ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಅವರು ಆರೋಪಿಸಿದ್ದಾರೆ.
ಪ್ರಸ್ತುತ ಘಟನೆಯನ್ನು ಪೊಲೀಸ್ ಇಲಾಖೆಯು ಗಂಭೀರವಾಗಿ ಪರಿಗಣಿಸಿ, ಹಲ್ಲೆ ಮಾಡಿದ ಮತ್ತು ಮಾಡಿಸಿದ ಪ್ರತಿಯೊಬ್ಬರನ್ನೂ ಗುರುತು ಹಚ್ಚಿ, ಸುಮೋಟೋ ಪ್ರಕರಣವನ್ನು ದಾಖಲಿಸುವ ಮೂಲಕ ಕಠಿಣ ಶಿಕ್ಷೆಗೊಳಪಡಿಸಬೇಕು ಎಂದು ಅವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.