ಸುಳ್ಯ (ವಿಶ್ವ ಕನ್ನಡಿಗ ನ್ಯೂಸ್) ; ಗುತ್ತಿಗಾರು-ಮೊಗ್ರ ಎಂಬಲ್ಲಿ ಕೋಳಿ ಸಾರಿಗೆ ಆರಂಭವಾದ ತಂದೆ ಮಗನ ಜಗಳ ಮಗನ ಕೊಲೆಯಲ್ಲಿ ಅಂತ್ಯಗೊಂಡಿದೆ. ಮೊಗ್ರ ಏರಣಗುಡ್ಡೆಯ ಮಾತೃ ಮಜಲು ನಿವಾಸಿ ಶಿವರಾಮ(32)ಮೃತಪಟ್ಟವರು. ತಂದೆ ಶೀನ ಕೊಲೆ ಮಾಡಿದ ಆರೋಪಿ.
ಮಗ ಶಿವರಾಮ ರಾತ್ರಿ ತಡವಾಗಿ ಬಂದಾಗ ಮನೆಯಲ್ಲಿ ಕೋಳಿಸಾರು ಮುಗಿದ ಕಾರಣ ತಂದೆ ಮಗನ ನಡುವೆ ಜಗಳ ಶುರುವಾಗಿದೆ. ಕೋಪ ವಿಕೋಪಕ್ಕೆ ತಿರುಗಿ ತಂದೆ ಮಗನ ತಲೆಗೆ ಬಡಿಗೆಯಿಂದ ಬಲವಾಗಿ ಹೊಡೆದಿದ್ದರಿಂದ ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿಷಯ ತಿಳಿದ ಸುಬ್ರಹ್ಮಣ್ಯ ಪೊಲೀಸರು ಸ್ಥಳಕ್ಕೆ ಧಾವಿಸಿ ಆರೋಪಿ ತಂದೆಯಮನ್ನು ಬಂಧಿಸಿದ್ದು, ಮೃತದೇಹವನ್ನು ಕಡಬ ಆಸ್ಪತ್ರೆಗೆ ರವಾನಿಸಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.