ಮಂಜೇಶ್ವರಂ (ವಿಶ್ವ ಕನ್ನಡಿಗ ನ್ಯೂಸ್) : ನಂಬರ್ ಪ್ಲೇಟ್ ಇಲ್ಲದ ಬೈಕ್ನಲ್ಲಿ ಅಕ್ರಮವಾಗಿ ಸಾಗಿಸಲು ಯತ್ನಿಸಿದ ಎರಡು ಕಿಲೋ ಗಾಂಜಾ ಸಹಿತ ಇಬ್ಬರನ್ನು ಮಂಜೇಶ್ವರಂ ಪೊಲೀಸರು ಬಂಧಿಸಿದ್ದಾರೆ. ಮಂಜೇಶ್ವರಂ ಕುಂಚತ್ತೂರು ಮಸೀದಿ ಬಳಿ ನಿವಾಸಿ ಮುಹಮ್ಮದ್ ಫಯಾಝ್ (20) ಮತ್ತು ಕುಂಚತ್ತೂರು ಬಾಜೋಳಿಗೆಯ ಅಲ್ಲಮ ಇಕ್ಬಾಲ್ (20) ಬಂಧಿತರು.
ಮಂಜೇಶ್ವರಂ ಠಾಣಾಧಿಕಾರಿ ಎ. ಸಂತೋಷ್ ಕುಮಾರ್ ಮತ್ತು ತಂಡ ನಡೆಸಿದ ವಾಹನ ತಪಾಸಣೆ ವೇಳೆ ಯಮಹಾ ಬೈಕ್ ನಂಬರ್ ಪ್ಲೇಟ್ ಇಲ್ಲದಿರುವುದು ಗಮನಕ್ಕೆ ಬಂದಿದೆ. ಅಷ್ಟರಲ್ಲಿ ಪೊಲೀಸರನ್ನು ಕಂಡ ಯುವಕ ಅತಿವೇಗದಿಂದ ಚಲಾಯಿಸಿಕೊಂಡು ಹೋಗಿದ್ದಾನೆ. ಬೆನ್ನತ್ತಿದ ಪೊಲೀಸರು ಬೈಕ್ ಹಿಡಿದಿದ್ದಾರೆ. ನಂತರ ತಪಾಸಣೆ ನಡೆಸಿದಾಗ ಗಾಂಜಾ ಪತ್ತೆಯಾಗಿದೆ. ಆರೋಪಿಯನ್ನು ಇಂದು ಕಾಸರಗೋಡು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.